ಬ್ರೇಕಿಂಗ್ ನ್ಯೂಸ್
08-09-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆಯಾಗಬೇಕೆಂದು ಹೈಕೋರ್ಟಿಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶರು ಪರಿಗಣಿಸಲು ಒಪ್ಪಿಗೆ ನೀಡಿಲ್ಲ. ಬದಲಿಗೆ, ಮೂಲ ಅರ್ಜಿದಾರರು, ಸಂತ್ರಸ್ತ ಕುಟುಂಬ ಅಥವಾ ಸರಕಾರ ಮಾತ್ರ ಮರು ತನಿಖೆಗೆ ಮನವಿ ಮಾಡಬಹುದೆಂದು ಹೇಳಿದೆ.
ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗಿರೀಶ್ ಭಾರದ್ವಾಜ್, ನವೀನ್ ಕುಮಾರ್ ನೆರಿಯ ಮತ್ತು ವಿನಾಯಕ ಫ್ರೆಂಡ್ಸ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಧೀಶರು ವಿಚಾರಣೆಗೆ ಸ್ವೀಕರಿಸಿದ್ದರು. ಇವರ ಪರವಾಗಿ ಪುತ್ತೂರಿನ ವಕೀಲ ಅರುಣ್ ಶ್ಯಾಮ್ ವಕಾಲತ್ತು ಮಂಡಿಸಿದ್ದರು.
ಆದರೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮೂರನೇ ವ್ಯಕ್ತಿಯ ಕೋರಿಕೆ ಮೇರೆಗೆ ಒಂದು ಪ್ರಕರಣವನ್ನು ಮರು ತನಿಖೆ ಮಾಡಲು ಅವಕಾಶ ಇರುವುದಿಲ್ಲ. ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮಾತ್ರ ಆರೋಪಿಯನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶ ಇದೆ. ಅದು ಬಿಟ್ಟರೆ ಸಾರ್ವಜನಿಕರ ಹಕ್ಕೊತ್ತಾಯ, ಜನಾಕ್ರೋಶಕ್ಕೆ ಮಣಿದು ರಾಜ್ಯ ಸರಕಾರವೂ ಈ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ ನ್ಯಾಯಾಧೀಶರು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಹಾಗೆಂದು ಕೋರ್ಟಿನ ತೀರ್ಪಿನ ವಿರುದ್ಧ ಸಭೆ, ಸಮಾರಂಭ, ಧರಣಿ ಅಥವಾ ಜನರ ಭಾವನೆಗಳನ್ನು ಪರಿಗಣಿಸಿ ಕೋರ್ಟ್ ಕಾನೂನು ಚೌಕಟ್ಟನ್ನು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ, ಕಾನೂನು ಮಿತಿಯಲ್ಲಿ ವ್ಯವಹರಿಸಬೇಕಾಗುತ್ತದೆ. ಇದರ ಬದಲು ಸಂತ್ರಸ್ತ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡುವಂತೆ ಇಬ್ಬರು ನ್ಯಾಯಾಧೀಶರಿದ್ದ ವಿಭಾಗೀಯ ಪೀಠ ಸಲಹೆ ಮಾಡಿದೆ.
Sowjanya rape case, No third party allowed for re-investigation, PIL petition dismissed in High Court. The judge did not agree to consider the public interest petition submitted to the High Court for a re-investigation in the Sowjanya murder case.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm