ಬ್ರೇಕಿಂಗ್ ನ್ಯೂಸ್
11-09-23 05:17 pm HK News Desk ಕರ್ನಾಟಕ
ಮೈಸೂರು, ಸೆ.11: ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಸಹ ಬಿಜೆಪಿಗೆ ಹೋಗದು. ನಾನು ಯಾವುದೇ ಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡಿದರೇ, ಅದಕ್ಕೆ ಆ ಪಕ್ಷವನ್ನು ಸೇರುತ್ತೇನೆ ಎಂದು ಹೇಳುವುದು ಸರಿಯಲ್ಲ ಎಂದರು.
ಕಾವೇರಿ ನೀರು ಬಿಡುಗಡೆ ವಿಚಾರ: ಪ್ರಾಧಿಕಾರದ ಆದೇಶ ಇರುವ ಕಾರಣ ಅನಿವಾರ್ಯವಾಗಿ ನೀರು ಬಿಡುತ್ತಿದ್ದೇವೆ. ಖುಷಿಯಿಂದ ನೀರು ಬಿಡುತ್ತಿಲ್ಲ. ತಮಿಳುನಾಡು ವಿನಾಃ ಕಾರಣ ಕ್ಯಾತೆ ತೆಗೆಯುತ್ತಿದೆ. 21 ನೇ ತಾರೀಖಿನಂದು ಮತ್ತೆ ಕೋರ್ಟಿನಲ್ಲಿ ನಮ್ಮ ಕಷ್ಟವನ್ನು ವಿವರಿಸುತ್ತೇವೆ. ಬಿಜೆಪಿಯವರು ಇದರಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಲಿ. ಈಗ ಮತ್ತೆ ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಪ್ರಧಾನಿ ಬಳಿ ನಿಯೋಗ ಹೋಗಲು ತಯಾರಿದ್ದೆವು. ಆದರೆ ಪ್ರಧಾನಿ ಭೇಟಿಗೆ ದಿನಾಂಕವೇ ಸಿಗುತ್ತಿಲ್ಲ. ಬಿಜೆಪಿಯವರಿಗೆ ಹೇಳಿದರೆ ಅವರು ಕೇಳುವ ಸ್ಥಿತಿಯಲ್ಲಿಲ್ಲ. ಇಲ್ಲೇ ಕುಳಿತು ಕಥೆ ಹೇಳುತ್ತಿದ್ದಾರೆ. ನಾವು ರೈತರ ರಕ್ಷಣೆಗೆ ಈಗಲೂ ಬದ್ದ ಎಂದು ಸಿಎಂ ತಿಳಿಸಿದರು.
ಮುಂದಿನ ಕ್ಯಾಬಿನೆಟ್ನಲ್ಲಿ ಬರ ಘೋಷಣೆ:
ರಾಜ್ಯದಲ್ಲಿ ಮಳೆ ಇಲ್ಲದೆ ಕೆಲವು ತಾಲ್ಲೂಕುಗಳಲ್ಲಿ ಬರ ಬಂದಿದ್ದು, ಸದ್ಯಕ್ಕೆ 61 ತಾಲ್ಲೂಕುಗಳನ್ನು ಬರದ ತಾಲ್ಲೂಕುಗಳೆಂದು ಪಟ್ಟಿ ಮಾಡಿದ್ದೇವೆ. ಇನ್ನೂ 136 ತಾಲ್ಲೂಕುಗಳಲ್ಲಿ ಬರ ಅಧ್ಯಯನ ನಡೆಯುತ್ತಿದೆ. ಅದರ ವರದಿ ಸೇರಿಸಿ, ಮುಂದಿನ ಕ್ಯಾಬಿನೆಟ್ನಲ್ಲಿ ಬರ ಘೋಷಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
'ಒಂದು ದೇಶ, ಒಂದು ಚುನಾವಣೆ ಅಸಾಧ್ಯ':
ಒಂದು ದೇಶ, ಒಂದು ಚುನಾವಣೆ ಈ ಯೋಜನೆಯ ಅವೈಜ್ಞಾನಿಕವಾದುದು. ಒಂದು ಚುನಾವಣೆ ನಡೆಸಲು ಹೇಗೆ ಸಾಧ್ಯ?. ಇದೊಂದು ಅಸಾಧ್ಯದ ಮಾತು. ಕೆಲವು ರಾಜ್ಯಗಳಲ್ಲಿ ರಾಜ್ಯಪಾಲರ ಆಡಳಿತವಿರುತ್ತದೆ. ಕೆಲವು ಕಡೆ ಅರ್ಧ ಸರ್ಕಾರ ನಡೆಯುತ್ತಿರುತ್ತದೆ. ಕರ್ನಾಟಕದ ಚುನಾವಣಾ ಫಲಿತಾಂಶದಿಂದ ಕೇಂದ್ರದ ಬಿಜೆಪಿ ನಾಯಕರು ದೃತಿಗೆಟ್ಟಿದ್ದಾರೆ. ಮೋದಿ ಬಂದು ಪ್ರಚಾರ ಮಾಡಿದ ಕಡೆ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ. ಇದೇ ಒತ್ತಡದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
Even my corpse will not join the BJP, said Chief Minister and Congress leader Siddaramaiah. Speaking to media persons, here, on Monday, he said, his entire political career is against communal forces and thus the statement of former chief minister H D Kumaraswamy is funny.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm