ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm