ಬ್ರೇಕಿಂಗ್ ನ್ಯೂಸ್
19-09-23 12:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರಿನ್ನು ಖುದ್ದಾಗಿ ಡ್ರೈವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ರು, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.
ಆದರೆ, ಸೆ. 19ರ ಬೆಳಗ್ಗೆ ಬಂದ ವರ್ತಮಾನದ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಕಾಲ್ಕಿತ್ತಿದ್ದರು ಎಂದು ಹೇಳಲಾಗಿದೆ.
ಪ್ರತಿ ಗಂಟೆಗೆ ಸ್ಥಳ ಬದಲಾಯಿಸುತ್ತಿದ್ದ ಸ್ವಾಮೀಜಿ, ಹಾಲಶ್ರೀ ಅವರು ರೈಲಿನಲ್ಲಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಕಾವಿಯನ್ನು ತ್ಯಜಿಸಿ, ಟೀ ಶರ್ಟ್, ಪ್ಯಾಂಟ್ ಹಾಕಿಕೊಂಡು ವೇಷ ಮರೆಸಿಕೊಂಡಿದ್ದರು. ಕಟಕ್ ನಿಂದ ಬೌದ್ಧ್ ಗಯಾಕ್ಕೆ ತೆರಳುವ ರೈಲಿನಲ್ಲಿದ್ದರು ಅವರು. ಆದರೂ, ಅವರನ್ನು ಸೂಕ್ತವಾಗಿ ಗುರುತು ಹಿಡಿಯುವಲ್ಲಿ ಸಿಸಿಬಿ ನೆರವಾಗಿದೆ. ಅವರನ್ನು ಕಟಕ್ ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.
Chaitra Kundapura fraud case, Main accused Abinava Halashri swamiji arrested at Odisha by CCB police. He was been absconding from the day the case was registered, finally the Bangalore CCB police have nabbed him in Odisha at a private lodge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am