ಬ್ರೇಕಿಂಗ್ ನ್ಯೂಸ್
19-09-23 12:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರಿನ್ನು ಖುದ್ದಾಗಿ ಡ್ರೈವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ರು, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.
ಆದರೆ, ಸೆ. 19ರ ಬೆಳಗ್ಗೆ ಬಂದ ವರ್ತಮಾನದ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಕಾಲ್ಕಿತ್ತಿದ್ದರು ಎಂದು ಹೇಳಲಾಗಿದೆ.
ಪ್ರತಿ ಗಂಟೆಗೆ ಸ್ಥಳ ಬದಲಾಯಿಸುತ್ತಿದ್ದ ಸ್ವಾಮೀಜಿ, ಹಾಲಶ್ರೀ ಅವರು ರೈಲಿನಲ್ಲಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಕಾವಿಯನ್ನು ತ್ಯಜಿಸಿ, ಟೀ ಶರ್ಟ್, ಪ್ಯಾಂಟ್ ಹಾಕಿಕೊಂಡು ವೇಷ ಮರೆಸಿಕೊಂಡಿದ್ದರು. ಕಟಕ್ ನಿಂದ ಬೌದ್ಧ್ ಗಯಾಕ್ಕೆ ತೆರಳುವ ರೈಲಿನಲ್ಲಿದ್ದರು ಅವರು. ಆದರೂ, ಅವರನ್ನು ಸೂಕ್ತವಾಗಿ ಗುರುತು ಹಿಡಿಯುವಲ್ಲಿ ಸಿಸಿಬಿ ನೆರವಾಗಿದೆ. ಅವರನ್ನು ಕಟಕ್ ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.
Chaitra Kundapura fraud case, Main accused Abinava Halashri swamiji arrested at Odisha by CCB police. He was been absconding from the day the case was registered, finally the Bangalore CCB police have nabbed him in Odisha at a private lodge.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm