ಬ್ರೇಕಿಂಗ್ ನ್ಯೂಸ್
19-09-23 12:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರಿನ್ನು ಖುದ್ದಾಗಿ ಡ್ರೈವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ರು, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.
ಆದರೆ, ಸೆ. 19ರ ಬೆಳಗ್ಗೆ ಬಂದ ವರ್ತಮಾನದ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಕಾಲ್ಕಿತ್ತಿದ್ದರು ಎಂದು ಹೇಳಲಾಗಿದೆ.
ಪ್ರತಿ ಗಂಟೆಗೆ ಸ್ಥಳ ಬದಲಾಯಿಸುತ್ತಿದ್ದ ಸ್ವಾಮೀಜಿ, ಹಾಲಶ್ರೀ ಅವರು ರೈಲಿನಲ್ಲಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಕಾವಿಯನ್ನು ತ್ಯಜಿಸಿ, ಟೀ ಶರ್ಟ್, ಪ್ಯಾಂಟ್ ಹಾಕಿಕೊಂಡು ವೇಷ ಮರೆಸಿಕೊಂಡಿದ್ದರು. ಕಟಕ್ ನಿಂದ ಬೌದ್ಧ್ ಗಯಾಕ್ಕೆ ತೆರಳುವ ರೈಲಿನಲ್ಲಿದ್ದರು ಅವರು. ಆದರೂ, ಅವರನ್ನು ಸೂಕ್ತವಾಗಿ ಗುರುತು ಹಿಡಿಯುವಲ್ಲಿ ಸಿಸಿಬಿ ನೆರವಾಗಿದೆ. ಅವರನ್ನು ಕಟಕ್ ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.
Chaitra Kundapura fraud case, Main accused Abinava Halashri swamiji arrested at Odisha by CCB police. He was been absconding from the day the case was registered, finally the Bangalore CCB police have nabbed him in Odisha at a private lodge.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm