ಬ್ರೇಕಿಂಗ್ ನ್ಯೂಸ್
19-09-23 12:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರಿನ್ನು ಖುದ್ದಾಗಿ ಡ್ರೈವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ರು, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.
ಆದರೆ, ಸೆ. 19ರ ಬೆಳಗ್ಗೆ ಬಂದ ವರ್ತಮಾನದ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಕಾಲ್ಕಿತ್ತಿದ್ದರು ಎಂದು ಹೇಳಲಾಗಿದೆ.
ಪ್ರತಿ ಗಂಟೆಗೆ ಸ್ಥಳ ಬದಲಾಯಿಸುತ್ತಿದ್ದ ಸ್ವಾಮೀಜಿ, ಹಾಲಶ್ರೀ ಅವರು ರೈಲಿನಲ್ಲಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಕಾವಿಯನ್ನು ತ್ಯಜಿಸಿ, ಟೀ ಶರ್ಟ್, ಪ್ಯಾಂಟ್ ಹಾಕಿಕೊಂಡು ವೇಷ ಮರೆಸಿಕೊಂಡಿದ್ದರು. ಕಟಕ್ ನಿಂದ ಬೌದ್ಧ್ ಗಯಾಕ್ಕೆ ತೆರಳುವ ರೈಲಿನಲ್ಲಿದ್ದರು ಅವರು. ಆದರೂ, ಅವರನ್ನು ಸೂಕ್ತವಾಗಿ ಗುರುತು ಹಿಡಿಯುವಲ್ಲಿ ಸಿಸಿಬಿ ನೆರವಾಗಿದೆ. ಅವರನ್ನು ಕಟಕ್ ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.
Chaitra Kundapura fraud case, Main accused Abinava Halashri swamiji arrested at Odisha by CCB police. He was been absconding from the day the case was registered, finally the Bangalore CCB police have nabbed him in Odisha at a private lodge.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm