ಬ್ರೇಕಿಂಗ್ ನ್ಯೂಸ್
20-09-23 10:50 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.20: ಸ್ವಯಂಘೋಷಿತ ಸ್ವಾಮೀಜಿ ಎಂದು ಹೇಳಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಪ್ರಣವಾನಂದ ಸ್ವಾಮೀಜಿಗಳು ಈಡಿಗ ಸಮುದಾಯದ ಸ್ವಯಂ ಘೋಷಿತ ಸ್ವಾಮೀಜಿಗಳೆಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈಡಿಗ ಸಮುದಾಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಅವರು ರಾಜಕೀಯ ಮುಖಂಡರಲ್ಲಿ ಬಿನ್ನಾಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಕ್ಷೇತ್ರದಲ್ಲಿ ಅಲ್ಲೋಲ ಕಲ್ಲೋಲ ಮೂಡಿಸುತ್ತಿರುವುದು ಸರಿಯಲ್ಲ. ನಮ್ಮ ಕೇಂದ್ರ ಸಂಘ ಹಾಗೂ ಜಿಲ್ಲಾ ಸಂಘಗಳ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ʼಈಡಿಗ ಸಮುದಾಯ ಸಂಘ ಸ್ಥಾಪನೆಯಾಗಿ 78 ವರ್ಷಗಳು ಕಳೆದಿವೆ. 2008ರಲ್ಲಿ ರೇಣುಕಾನಂದ ಎಂಬವರನ್ನು ಸ್ವಾಮೀಜಿಗಳನ್ನಾಗಿ ನೇಮಕ ಮಾಡಲಾಯಿತು. ಬಳಿಕ ರೇಣುಕಾನಂದರವರು ತಮ್ಮ ಹೆಚ್ಚಿನ ಆಧ್ಯಾತ್ಮಿಕ ಅಧ್ಯಯನಕ್ಕಾಗಿ 2014 ರಲ್ಲಿ ಪೀಠವನ್ನು ತ್ಯಜಿಸಿದರು. ಪ್ರಸ್ತುತ ಬಿ.ಕೆ.ಹರಿಪ್ರಸಾದ್ ಅವರ ಒಪ್ಪಿಗೆ ಮೇರೆಗೆ ವಿಖ್ಯಾತಾನಂದ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ. ಆದರೆ ಪ್ರಣವಾನಂದ ಅನಧಿಕೃತವಾಗಿ ಈಡಿಗ ಸ್ವಾಮೀಜಿಗಳೆಂದು ಹೇಳಿಕೊಂಡು ಜನಾಂಗವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ನಿರ್ದೇಶಕರಾದ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀಧರ್, ರಾಮನಗರ, ಚಿತ್ರದುರ್ಗ, ಬೆಳಗಾವಿ ಜಿಲ್ಲಾ ಅಧ್ಯಕ್ಷರು, ಬಿಲ್ಲವ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಾಮಧಾರಿ ದೀವರ ಅಧ್ಯಕ್ಷರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
Karnataka Idiga community slams Pranavananda swami says he doesn't belong to Idiga.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm