ಬ್ರೇಕಿಂಗ್ ನ್ಯೂಸ್
21-09-23 11:46 am Bangalore Correspondent ಕರ್ನಾಟಕ
ಬೆಂಗಳೂರು, ಸೆ 21: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಯಥಾವತ್ತಾಗಿ ಪಾಲಿಸುವಂತೆ ಸುಪ್ರೀಂ ಕೋರ್ಟ್ ನ್ಯಾ. ಬಿ.ಆರ್. ಗವಾಯಿ ನೇತೃತ್ವದ ಮೂವರು ಸದಸ್ಯರ ಪೀಠದಿಂದ ಆದೇಶ ಹೊರಡಿಸಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಲಾಗಿತ್ತು. ನಾವು 2,500 ಕ್ಯೂಸೆಕ್ಸ್ ನೀರನ್ನು ಮಾತ್ರವೇ ಬಿಡುಗಡೆ ಮಾಡಲು ಸಾಧ್ಯವಿದೆ. ಕಳೆದ ಎರಡು ತಿಂಗಳಿನಿಂದ ಮಳೆ ಕೊರತೆ ಇದೆ. ಆದ್ದರಿಂದ ನೀರು ಬಿಡಲಾಗಲ್ಲ ಎಂದು ಕರ್ನಾಟಕದ ವಕೀಲ ಶ್ಯಾಮ್ ದಿವಾನ್ ವಾದ ಮಂಡಿಸಿದ್ದರು.

ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿ ಇದೆ, ರೈತರು ಎಲ್ಲೆಡೆ ನೀರಿನ ಅಭಾವವಿದೆ. ನಮಗೆ ಕುಡಿಯವ ನೀರಿನ ಅಭಾವವಿದೆ ಆದ್ದರಿಂದ ತಮಿಳುನಾಡಿನ ಬೆಳೆಗಳಿಗೆ ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದರು. ಆದರೆ ತಮಿಳುನಾಡು ಪರ ಮುಕುಲ್ ರೋಹ್ಟಗಿ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಆದೇಶ ಪಾಲಿಸಬೇಕು ಎಂದು ಹೇಳಿದ್ದರು.
ತಮಿಳುನಾಡು ವಾದ ಏನಾಗಿತ್ತು?
ನೀರು ಹಂಚಿಕೆ ಬಗ್ಗೆ CWRC, CWMA ಸಭೆ ಮಾಡಿದ್ದು, ಪ್ರಾಧಿಕಾರ ನೀರು ಹರಿಸಲು ಸೂಚನೆ ನೀಡಿವೆ. ಆದರೆ ಕರ್ನಾಟಕ ಆದೇಶವನ್ನು ಪಾಲಿಸಿಲ್ಲ. ನಾವು ಬಹಳಷ್ಟು ಕಡಿಮೆ ನೀರು ಪಡೆಯುತ್ತಿದ್ದೇವೆ. CWMA ಆದೇಶಿಸಿದಷ್ಟು ನೀರು ಬಿಡುಗಡೆ ಮಾಡ್ತಿಲ್ಲ. ಕರ್ನಾಟಕ ಪ್ರತಿದಿನ 1200 ಕ್ಯೂ. ನೀರು ಬಿಡ್ತಿದೆ. ಇದು ಯಾವ ನ್ಯಾಯ ಎಂದು ಮುಕುಲ್ ರೋಹ್ಟಗಿ ವಾದ ಮಂಡಿಸಿದರು.
ನಮಗೆ ಪ್ರತಿದಿನ 6,400 ಕ್ಯೂಸೆಕ್ ನೀರು ಬಿಡಬೇಕು. ನಮಗೆ CWMA ಆದೇಶದ ಬಗ್ಗೆ ತಕರಾರು ಇದೆ. ಮಳೆ ಇಲ್ಲ ಎಂಬ ಅರಿವಿದೆ, ಆದರೆ ನಮ್ಮ ಪಾಲಿನ ನೀರು ಕೇಳ್ತಿದ್ದೇವೆ. ಮಳೆ ಕಡಿಮೆ, ನೀರಿನ ಮಟ್ಟ ಇಳಿಕೆ ಬಗ್ಗೆ ಗೊತ್ತಿದೆ. ವರದಿ ಆಧರಿಸಿಯೇ CWMA ಆದೇಶ ನೀಡಿದೆ ಎಂದು ರೋಹ್ಟಗಿ ತಮ್ಮ ವಾದದಲ್ಲಿ ಹೇಳಿದರು.
ಕಡಿಮೆ ನೀರು ಬಿಡುಗಡೆಗೆ ಆದೇಶಿಸಿದ್ರೂ ಪಾಲಿಸ್ತಿಲ್ಲ. ಅಗತ್ಯ ಇರೋದು 7,200 ಕ್ಯೂಸೆಕ ನೀರು. ಆದ್ರೆ ಇದು ಶೇ.25ಕ್ಕೆ ಇಳಿಕೆಯಾಗಿದೆ. ಕರ್ನಾಟಕ 1000-2000 ಕ್ಯೂ ಬಿಡುತ್ತೇವೆ ಎಂದು ಹೇಳುತ್ತವೆ. ನಾವು 10 ಸಾವಿರದಿಂದ 12 ಸಾವಿರ ಕ್ಯೂ. ಕೇಳುತ್ತಿದ್ದೇವೆ. ಪ್ರಾಧಿಕಾರ ಕೇಳಿದ್ದಕ್ಕಿತ 7,200 ಕ್ಯೂಸೆಕ್ ಕಡಿಮೆ ಮಾಡಿದೆ. ಈಗ ದಿನಕ್ಕೆ 7,200 ಕ್ಯೂಸೆಕ್ ಆದ್ರೂ ಬಿಡಬೇಕು. ಇದಕ್ಕಿಂತ ಶೇ.25ರಷ್ಟು ಕಡಿಮೆ ಮಾಡಬಾರದು ಎಂದು ಮುಕುಲ್ ರೋಹ್ಟಗಿ ಮನವಿ ಮಾಡಿಕೊಂಡರು.
ಕರ್ನಾಟಕ ವಾದ ಏನಾಗಿತ್ತು?
ಕರ್ನಾಟಕದಲ್ಲಿ ನೀರಿನ ಸಮಸ್ಯೆಯಿದೆ. ನಾವು CWMA ಹೇಳಿದಂತೆ ನೀರು ಹರಿಸಿದ್ದೇವೆ. ಕರ್ನಾಟಕದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಸಂಕಷ್ಟದಲ್ಲಿ ತಮಿಳುನಾಡಿಗೆ ನೀರು ಬಿಡಿ ಅಂದ್ರೆ ಹೇಗೆ? ತಮಿಳುನಾಡಿಗೆ ನಿತ್ಯ 12,500 ಕ್ಯೂ. ನೀರು ಬಿಡಬೇಕು. ನಾವು ಹೆಚ್ಚುವರಿ ನೀರು ಹರಿಸಿದ್ದೇವೆ ಎಂದು ಕರ್ನಾಟಕದ ಪರ ಶ್ಯಾಮ್ ದಿವಾನ್ ವಾದ ಮಂಡಿಸಿದ್ದರು.
Cauvery Water, Supreme court orders to release 5000 units of water to Tamilnadu.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm