ಬ್ರೇಕಿಂಗ್ ನ್ಯೂಸ್
21-09-23 10:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ಬೈಂದೂರು ಬಿಜೆಪಿ ಟಿಕೆಟ್ ಹೆಸರಲ್ಲಿ ಉದ್ಯಮಿಯಿಂದ ಹಣ ಪಡೆದು ವಂಚಿಸಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ. ಚೈತ್ರಾ ತಪ್ಪೊಪ್ಪಿಗೆಯಿಂದ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದೆ.
ಪ್ರಕರಣದಲ್ಲಿ ಬಂಧನ ಆದಂದಿನಿಂದಲೂ ಚೈತ್ರಾ ಡ್ರಾಮಾ ಮಾಡ್ತಿದ್ದರು. ಊಟ ಬಿಟ್ಟು ಆಸ್ಪತ್ರೆಯನ್ನೂ ಸೇರಿದ್ದರು. ಹಾಲಶ್ರೀ ಸಿಗಲಿ ದೊಡ್ಡ ದೊಡ್ಡವರ ಹೆಸರೇ ಹೊರಬರುತ್ತೆ ಎಂದು ಹೇಳಿ ಅಚ್ಚರಿ ಸೃಷ್ಟಿಸಿದ್ದರು. ಉದ್ಯಮಿ ಇಂದಿರಾ ಕ್ಯಾಂಟೀನ್ ಹಣಕ್ಕಾಗಿ ತನ್ನನ್ನು ಫಿಕ್ಸ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೆ, ಹಾಲಶ್ರೀ ಸ್ವಾಮೀಜಿ ಕಡೆ ಬೊಟ್ಟು ಮಾಡ್ತಿದ್ದ ಚೈತ್ರಾ, ಸಿಸಿಬಿ ಮುಂದೆಯೂ ಇದನ್ನೇ ಹೇಳಿದ್ದರು. ಯಾಕಂದ್ರೆ, ಹಾಲಶ್ರೀ ಎಸ್ಕೇಪ್ ಆಗಿದ್ದಾರೆ. ಅವರು ಸಿಗಲ್ಲ ಅಂತಾ ಚೈತ್ರಾ ಅಂದುಕೊಂಡಿದ್ದರು. ಆದ್ರೆ, ಯಾವಾಗ ಹಾಲಶ್ರೀ ಒಡಿಶಾ ಕಟಕ್ನಲ್ಲಿ ಬಂಧನಕ್ಕೊಳಗಾದರೋ ಇತ್ತ ಚೈತ್ರಾ ನಡುಗಿ ಹೋಗಿದ್ದರು. ಇದೀಗ ಹಾಲಶ್ರೀ ಮುಂದೆ ಚೈತ್ರಾರನ್ನ ಕೂರಿಸಿಯೇ ಪೊಲೀಸರು ವಿಚಾರಣೆ ನಡೆಸಿದ್ದು ನಿಜ ಬಾಯಿ ಬಿಡುವಂತೆ ಮಾಡಿಸಿದ್ದಾರೆ. ಶ್ರೀಕಾಂತ್ ಪೂಜಾರಿ ಜೊತೆ ಸೇರಿ ವಂಚನೆಗೆ ಪ್ಲ್ಯಾನ್ ಮಾಡಿದ್ದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಚೈತ್ರಾ ಕುಂದಾಪುರ ಹಾಗೂ ಹಾಲಶ್ರೀ ಅವರನ್ನು ಮುಖಾಮುಖಿ ಕೂರಿಸಿ ಸಿಸಿಬಿ ತಂಡ ವಿಚಾರಣೆ ನಡೆಸಿದೆ. ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ಚೈತ್ರಾ ತಪ್ಪೊಪ್ಪಿಕೊಂಡಿದ್ದಾರೆ. ವ್ಯವಹಾರ ನಡೆಸಿದ್ದಕ್ಕೆ ವಿಡಿಯೋ, ಆಡಿಯೋ ಮೊಬೈಲ್ ಕರೆಗಳು, ವಂಚನೆ ಮಾಡಿದ್ದಾರೆ ಎನ್ನುವುದಕ್ಕೆ ಚಿನ್ನ, ಹಣ, ಬ್ಯಾಂಕ್ ಠೇವಣಿ, ಜಪ್ತಿ ಮಾಡಿದ್ದ ಕಾರು, ದಾಖಲೆಗಳನ್ನ ಮುಂದಿಟ್ಟು ಸಿಸಿಬಿ ತಂಡ ಪ್ರಶ್ನೆ ಮಾಡಿದಾಗ, ನಿರಾಕರಿಸುವುದಕ್ಕೆ ಆಗದೇ ಸಿಕ್ಕಿಬಿದ್ದಿದ್ದಾರೆ. ಸಿಸಿಬಿ ಇಟ್ಟ ದಾಖಲೆ ಕಂಡು ಎಲ್ಲವನ್ನೂ ಬಾಯ್ಬಿಟ್ಟ ಚೈತ್ರಾ, ತಾನು ಹಣ ಮಾಡುವ ಉದ್ದೇಶದಿಂದ ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಪರಿಚಿತರ ಮೂಲಕ ಗೋವಿಂದ ಬಾಬು ಅವರನ್ನು ಮುನ್ನಲೆಗೆ ತರುವುದು, ಟಿಕೆಟ್ ವಿಚಾರವಾಗಿ ನಂಬಿಕೆ ಬರುವಂತಹ ಸನ್ನಿವೇಶ ಸೃಷ್ಟಿಸುವುದು, ಒಂದು ವೇಳೆ ಟಿಕೆಟ್ ಸಿಕ್ಕರೆ ತಾನು ಸೇಫ್ ಅಂತ ಚೈತ್ರಾ ಪ್ಲ್ಯಾನ್ ಮಾಡಿದ್ದರು.
ಟಿಕೆಟ್ ಸಿಗದೇ ಹೋದರೆ, ನಾವು ಹಣ ಇಟ್ಟುಕೊಂಡಿಲ್ಲ ವಿಶ್ವನಾಥ್ ಜೀಗೆ ಕೊಟ್ಟಿದ್ದಾಗಿ ಹೇಳಿಕೆ ನೀಡಲು ತಂಡ ನಾಟಕ ಹೆಣೆದಿತ್ತು. ನಾವು ನೆಪ ಮಾತ್ರಕ್ಕೆ ಸಹಾಯ ಮಾಡಿದ್ದೇವೆ, ಹಣ ತೆಗೆದುಕೊಂಡು ಹೋಗಿ ನೀಡಿದ್ದೇವೆ ಅಷ್ಟೇ ಎಂದು ನಂಬಿಸುವುದು ಮತ್ತು ವಿಶ್ವನಾಥ್ ಜೀ ಮೃತಪಟ್ಟಿದ್ದಾರೆ, ನಮಗೇ ಗೊತ್ತೇ ಇಲ್ಲ ಎಂದು ಹೇಳಲು ತಂಡ ಸಂಚು ರೂಪಿಸಿದ್ದನ್ನೂ ಆರೋಪಿಗಳು ಒಪ್ಪಿದ್ದಾರೆ. 5 ಕೋಟಿ ರೂ. ಪೈಕಿ ಸುಮಾರು ಮೂರುವರೆ ಕೋಟಿ ಚೈತ್ರಾ ಕೈಸೇರಿತ್ತು. ಒಂದೂವರೆ ಕೋಟಿ ರೂಪಾಯಿ ಹಾಲಶ್ರೀ ಪಡೆದುಕೊಂಡಿದ್ದರು. ಈ ಎಲ್ಲಾ ವಿಚಾರಗಳನ್ನು ಚೈತ್ರಾ ಸಿಸಿಬಿಗೆ ತಿಳಿಸಿದ್ದಾರೆಂದು ಟಿವಿ ನೈನ್ ವರದಿ ಮಾಡಿದೆ.
CCB collects all evidence of Chaitra Kundapura, Chaitra and Halashree in fear.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am