ಬ್ರೇಕಿಂಗ್ ನ್ಯೂಸ್
22-09-23 02:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.22: ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡುತ್ತಿರುವುದು, ಮೈತ್ರಿ ಮಾತುಕತೆ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಮೈತ್ರಿ ವಿಚಾರ ಮುಂದಿಟ್ಟು ಕಾಂಗ್ರೆಸ್ ನಾಯಕರಿಗೆ ಕುಟುಕಿದೆ. 'ಬಿಜೆಪಿ ನಾಯಕರ ಭೇಟಿಗೆ ಸಿಗದ ಹೈಕಮಾಂಡ್ ನಾಯಕರು ಕುಮಾರಸ್ವಾಮಿಯವರಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ! ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ನಾವು ಮೊದಲೇ ಹೇಳಿದ್ದೆವು, ನಾವು ಹೇಳಿದಂತೆಯೇ ಈಗ ಸಾಬೀತು ಮಾಡುತ್ತಿದ್ದಾರೆ ಎಂದಿದೆ.
'ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನ ವಿಸರ್ಜಿಸಿವುದೇ ಉತ್ತಮ!' ಎಂದು ಜೆಡಿಎಸ್ & ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಮೂಲಕ ಬಿಜೆಪಿ & ಜೆಡಿಎಸ್ ಮೈತ್ರಿ ವಿಚಾರವನ್ನೇ ಮುಂದಿಟ್ಟು, ಹೊಸ ಅಸ್ತ್ರ ಪ್ರಯೋಗಿಸಲು ಕರ್ನಾಟಕ ಕಾಂಗ್ರೆಸ್ ಘಟಕ ಮುಂದಾಗಿದೆ.
ಇದೇ ವೇಳೆ, ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಜೆಡಿಎಸ್ & ಬಿಜೆಪಿ ಮಧ್ಯೆ ಮೈತ್ರಿ ಸಕ್ಸಸ್ ಆದರೆ, ಕೆಲವು ಸ್ಥಾನಗಳನ್ನು ಬಿಜೆಪಿ ಬಿಟ್ಟುಕೊಡಲಿದೆ. ಹೊಂದಾಣಿಕೆಯ ಪೈಕಿ ಹಳೇ ಮೈಸೂರು ಭಾಗದಲ್ಲೇ ಜೆಡಿಎಸ್ಗೆ ಹೆಚ್ಚಿನ ಸ್ಥಾನ ಸಿಗುವ ನಿರೀಕ್ಷೆ ಇದೆ. ಈಗಿರುವ ಚರ್ಚೆ ಪ್ರಕಾರ, ಸುಮಾರು 4 ಲೋಕಸಭೆ ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಬಹುದು. ಇನ್ನುಳಿದ 24 ಸ್ಥಾನದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಬಹುದು.
ರಾಜ್ಯ ಬಿಜೆಪಿ ನಾಯಕರನ್ನೇ ಭೇಟಿ ಮಾಡಲೊಪ್ಪದ ಬಿಜೆಪಿಯ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕರನ್ನು ನಿರಾಯಾಸವಾಗಿ ಭೇಟಿಯಾಗುತ್ತಾರೆ.
— Karnataka Congress (@INCKarnataka) September 21, 2023
A ಟೀಮ್ ಗಿಂತ B ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ @BJP4Karnataka?
ರಾಜ್ಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರ ಜೊತೆಗೆ ಹೋಗಿದ್ದಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು, ವಿರೋಧ ಪಕ್ಷದ ನಾಯಕನ…
JD(S) leader H D Kumaraswamy on Wednesday said he will be travelling to New Delhi on September 21 to meet BJP central leadership to discuss the possible alliance between both parties in Karnataka for 2024 Lok Sabha polls.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm