ಬ್ರೇಕಿಂಗ್ ನ್ಯೂಸ್
22-09-23 02:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.22: ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡುತ್ತಿರುವುದು, ಮೈತ್ರಿ ಮಾತುಕತೆ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಮೈತ್ರಿ ವಿಚಾರ ಮುಂದಿಟ್ಟು ಕಾಂಗ್ರೆಸ್ ನಾಯಕರಿಗೆ ಕುಟುಕಿದೆ. 'ಬಿಜೆಪಿ ನಾಯಕರ ಭೇಟಿಗೆ ಸಿಗದ ಹೈಕಮಾಂಡ್ ನಾಯಕರು ಕುಮಾರಸ್ವಾಮಿಯವರಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ! ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ನಾವು ಮೊದಲೇ ಹೇಳಿದ್ದೆವು, ನಾವು ಹೇಳಿದಂತೆಯೇ ಈಗ ಸಾಬೀತು ಮಾಡುತ್ತಿದ್ದಾರೆ ಎಂದಿದೆ.
'ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನ ವಿಸರ್ಜಿಸಿವುದೇ ಉತ್ತಮ!' ಎಂದು ಜೆಡಿಎಸ್ & ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಮೂಲಕ ಬಿಜೆಪಿ & ಜೆಡಿಎಸ್ ಮೈತ್ರಿ ವಿಚಾರವನ್ನೇ ಮುಂದಿಟ್ಟು, ಹೊಸ ಅಸ್ತ್ರ ಪ್ರಯೋಗಿಸಲು ಕರ್ನಾಟಕ ಕಾಂಗ್ರೆಸ್ ಘಟಕ ಮುಂದಾಗಿದೆ.
ಇದೇ ವೇಳೆ, ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಜೆಡಿಎಸ್ & ಬಿಜೆಪಿ ಮಧ್ಯೆ ಮೈತ್ರಿ ಸಕ್ಸಸ್ ಆದರೆ, ಕೆಲವು ಸ್ಥಾನಗಳನ್ನು ಬಿಜೆಪಿ ಬಿಟ್ಟುಕೊಡಲಿದೆ. ಹೊಂದಾಣಿಕೆಯ ಪೈಕಿ ಹಳೇ ಮೈಸೂರು ಭಾಗದಲ್ಲೇ ಜೆಡಿಎಸ್ಗೆ ಹೆಚ್ಚಿನ ಸ್ಥಾನ ಸಿಗುವ ನಿರೀಕ್ಷೆ ಇದೆ. ಈಗಿರುವ ಚರ್ಚೆ ಪ್ರಕಾರ, ಸುಮಾರು 4 ಲೋಕಸಭೆ ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಬಹುದು. ಇನ್ನುಳಿದ 24 ಸ್ಥಾನದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಬಹುದು.
ರಾಜ್ಯ ಬಿಜೆಪಿ ನಾಯಕರನ್ನೇ ಭೇಟಿ ಮಾಡಲೊಪ್ಪದ ಬಿಜೆಪಿಯ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕರನ್ನು ನಿರಾಯಾಸವಾಗಿ ಭೇಟಿಯಾಗುತ್ತಾರೆ.
— Karnataka Congress (@INCKarnataka) September 21, 2023
A ಟೀಮ್ ಗಿಂತ B ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ @BJP4Karnataka?
ರಾಜ್ಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರ ಜೊತೆಗೆ ಹೋಗಿದ್ದಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು, ವಿರೋಧ ಪಕ್ಷದ ನಾಯಕನ…
JD(S) leader H D Kumaraswamy on Wednesday said he will be travelling to New Delhi on September 21 to meet BJP central leadership to discuss the possible alliance between both parties in Karnataka for 2024 Lok Sabha polls.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm