ಬ್ರೇಕಿಂಗ್ ನ್ಯೂಸ್
23-09-23 07:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ 3 ನೇ ಎಪಿಎಂಸಿ ನ್ಯಾಯಾಲಯ ಅಕ್ಟೊಬರ್ 6 ರ ವರೆಗೆ ವಿಸ್ತರಿಸಿದೆ.
ಚೈತ್ರಾ ಜತೆಗೆ ಇತರ ಪ್ರಮುಖ ಆರೋಪಿಗಳಾದ ಅಭಿನವ ಹಾಲಶ್ರೀ, ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್ ಮತ್ತು ಧನರಾಜ್ ಸಹಿತ 7 ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 13 ರಂದು ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪೊಲೀಸ್ ಕಸ್ಟಡಿ ಅಂತ್ಯಗೊಂಡ ಕಾರಣ ಶನಿವಾರ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಯಿತು.
ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಚೈತ್ರಾ ಮತ್ತು ಇತರ ಎಂಟು ಮಂದಿ ವಿರುದ್ಧ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚೈತ್ರಾ ಮತ್ತು ಆಕೆಯ ಸಹಚರರು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರಕಿಸಿ ಕೊಡುವ ನೆಪದಲ್ಲಿ 5 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ.
ಚೈತ್ರಾ ಮತ್ತು ತಂಡ ಸಿಸಿಬಿ ತನಿಖಾಧಿಕಾರಿ ಎದುರು ತಪ್ಪೊಪ್ಪಿಗೆ ಹೇಳಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಚೈತ್ರಾ ಸಹಿತ ಎಲ್ಲರ ಹೇಳಿಕೆಗಳನ್ನೂ ವೀಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ. ಇಡೀ ವಂಚನೆಯ ಸಂಚನ್ನು ಗಗನ್, ಹಾಲಶ್ರೀ ಸ್ವಾಮೀಜಿ, ಶ್ರೀಕಾಂತ್ ಪೂಜಾರಿ ಹಾಗೂ ತಾನು ಸೇರಿ ರೂಪಿಸಿದ್ದು, ಇತರರಿಗೆ ಹಣದ ಆಮಿಷವೊಡ್ಡಿ ಸಹಾಯ ಪಡೆದುಕೊಂಡಿದ್ದೇವೆ ಅಷ್ಟೇ ಎಂದು ಚೈತ್ರಾ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಮತ್ತೆ ಕಣ್ಣೀರು!
ಚೈತ್ರಾ ಕುಂದಾಪುರ ಅವರನ್ನು ಮೊದಲ ಬಾರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭದಲ್ಲಿ ಪೊಲೀಸರ ಮೇಲೆ ದೂರು ಹೇಳಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದರು. ಈ ಬಾರಿ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು.
Chaitra Kundapura, six others sent to judicial custody till October 6th. Chaitra Kundapura and six accused in the sensational BJP MLA cash-for-ticket scam were sent to judicial custody till October 6 by the Third Additional Chief Metropolitan Magistrate Court in Bengaluru on Saturday.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
11-11-25 10:15 pm
Mangalore Correspondent
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm