ಬ್ರೇಕಿಂಗ್ ನ್ಯೂಸ್
23-09-23 09:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
Chaitra Kundapura case, Court issues order not to use the name of the place Kundapura
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm