ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm