ಬ್ರೇಕಿಂಗ್ ನ್ಯೂಸ್
10-11-20 03:13 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 10: ಆರ್.ಆರ್. ನಗರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. 25ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಮುನಿರತ್ನ 1,25,665 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸಿನ ಕುಸುಮಾ 67,995 ಮತಗಳನ್ನು ಗಳಿಸಿದ್ದಾರೆ.
ಮುನಿರತ್ನ ಈ ಕ್ಷೇತ್ರದಲ್ಲಿ ಸತತ ಮೂರನೇ ಗೆಲುವು ದಾಖಲಿಸಿದಂತಾಗಿದ್ದು, 57,672 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು 40 ಸಾವಿರ ಮತಗಳಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದರು. ಆದರೆ, ನಿರೀಕ್ಷೆಗೂ ಮೀರಿದ ಮತಗಳನ್ನು ಮುನಿರತ್ನ ಪಡೆದಿದ್ದು ವಿಶೇಷ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 9764 ಮತಗಳನ್ನಷ್ಟೇ ಪಡೆದಿದ್ದಾರೆ.



ಶಿರಾದಲ್ಲಿ ಅರಳಿದ ಕಮಲ
ತುಮಕೂರಿನ ಶಿರಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ದಾಖಲಿಸಿದ್ದಾರೆ. ಶಿರಾ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು ಹೊಸ ಬೆಳವಣಿಗೆ. ರಾಜೇಶ್ ಗೌಡ 69,559 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 58,190 ಮತಗಳನ್ನು ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ 32,508 ಮತಗಳನ್ನು ಪಡೆದಿದ್ದಾರೆ.

ಬಿಜೆಪಿಗೆ ನೆಲೆಯೇ ಇಲ್ಲದ ಶಿರಾ ಕ್ಷೇತ್ರದಲ್ಲಿ ಸಿಎಂ ಪುತ್ರ ವಿಜಯೇಂದ್ರ ಅವಿರತ ಶ್ರಮದಿಂದಾಗಿ ಕಮಲ ಅರಳುವಂತಾಗಿದೆ.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm