ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am