ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm