ಬ್ರೇಕಿಂಗ್ ನ್ಯೂಸ್
10-11-20 05:44 pm Bangalore Correspondent ಕರ್ನಾಟಕ
ಬಾಗಲಕೋಟೆ, ನವೆಂಬರ್ 10: ಉಪ ಚುನಾವಣೆಯಲ್ಲಿ ಅಧಿಕಾರ ಮತ್ತು ಹಣ ಕೆಲಸ ಮಾಡಿದೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡು ಚುನಾವಣೆ ಗೆದ್ದಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಆರ್.ಆರ್. ನಗರ ಮತ್ತು ಶಿರಾದಲ್ಲಿ ಗೆಲ್ಲುತ್ತೇವೆ ಅಂದ್ಕೊಂಡಿದ್ದೆವು. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಸರಕಾರದಲ್ಲಿ ಆಡಳಿತದಲ್ಲಿರುವವರು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು. ಆದರೆ ಬಿಜೆಪಿ ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿರುವ ಮಾಹಿತಿ ನನಗಿದೆ. ಬಿಜೆಪಿಯವರು ಹಣದ ಹೊಳೆ ಹರಿಸಿ ಗೆದ್ದಿದ್ದಾರೆ ಎಂದಿದ್ದಾರೆ.

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಇರಲಿಲ್ಲ. ಶಿರಾದಲ್ಲಿ ಅಲ್ಲಿನ ಕಾರ್ಯಕರ್ತರು ಮತ್ತು ಮುಖಂಡರು ಒಮ್ಮತದಿಂದಲೇ ಅಭ್ಯರ್ಥಿ ಹಾಕಿದ್ದರು. ಆರ್.ಆರ್.ನಗರದಲ್ಲಿ ಆಯ್ಕೆ ವಿಳಂಬವಾದರೂ, ವಿದ್ಯಾವಂತೆಯನ್ನು ಕಣಕ್ಕಿಳಿಸಿದ್ದೇವೆ. ಆದರೆ, ಬಿಜೆಪಿ ಅಭ್ಯರ್ಥಿ ಹಣ ಹಂಚಿ ಚುನಾವಣೆ ಗೆದ್ದಿದ್ದಾರೆ. ಜೆಡಿಎಸ್ ನವರು ಅಲ್ಲಿ ವೀಕ್ ಕ್ಯಾಂಡಿಡೇಟ್ ಹಾಕಿ, ಬಿಜೆಪಿಗೆ ಸಹಕಾರ ನೀಡಿದ್ದಾರೆ ಎಂದರು.
ಬಿಹಾರದಲ್ಲಿ ಮಹಾಘಟಬಂಧನ್ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ, ಫಲಿತಾಂಶ ಭಿನ್ನವಾಗಿ ಬರುತ್ತಿರುವುದನ್ನು ನೋಡಿದರೆ ಅನುಮಾನಕ್ಕೆ ಕಾರಣವಾಗುತ್ತಿದೆ. ಪೂರ್ತಿ ಫಲಿತಾಂಶ ಬಂದಿಲ್ಲ. ಏನಾಗುತ್ತೋ ನೋಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm