ಬ್ರೇಕಿಂಗ್ ನ್ಯೂಸ್
02-10-23 12:31 pm HK News Desk ಕರ್ನಾಟಕ
ಶಿವಮೊಗ್ಗ, ಅ.2: ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದಾಗ ಶಿವಮೊಗ್ಗ ನಗರದ ರಾಗಿಗುಡ್ಡ ರಸ್ತೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಭೇಟಿ ನೀಡಿದ್ದಾರೆ. ಅಲ್ಲದೇ ಆರ್ಎಎಫ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಕಲ್ಲು ತೂರಾಟ ಘಟನೆಯಲ್ಲಿ ಐದಾರು ಮಂದಿಗೆ ಗಾಯಗಳಾಗಿವೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಲೇ ಕಲ್ಲು ತೂರಾಟ ನಡೆದಿತ್ತು. ಉದ್ರಿಕ್ತರನ್ನು ಚದುರಿಸಿ ರಾಗಿಗುಡ್ಡಕ್ಕೆ ಸೀಮಿತವಾಗಿ 144 ಸೆಕ್ಷನ್ ಜಾರಿಗೊಳಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಮೇಲೆಯೂ ಕಲ್ಲು ತೂರಿದ್ದು ಎಷ್ಟು ಮಂದಿ ಗಾಯಗೊಂಡಿದ್ದಾರೆಂಬ ಮಾಹಿತಿ ನೀಡಿಲ್ಲ.




ಘರ್ಷಣೆ ನಡೆದ ಸ್ಥಳಗಳಿಗೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ, ಪೊಲೀಸರು ಹೋಗುತ್ತಿದ್ದಂತಯೇ ಅವರ ಮೇಲೆ ಕಲ್ಲು ಬೀಸಿದ್ದರು. ಸ್ಥಳದಲ್ಲಿ ಸೀಮಿತ ಸಂಖ್ಯೆಯಲ್ಲಿದ್ದ ಪೊಲೀಸರು ಅಲ್ಲಿಂದ ವಾಪಸ್ ಆಗಿದ್ದರು. ಕೆಲವೇ ಹೊತ್ತಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬಂದಿ ಆಗಮಿಸಿದ್ದು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಘಟನೆಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, 7 ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ, ಕಾರು, ಬೈಕ್ಗಳಿಗೂ ಹಾನಿಯಾಗಿವೆ.
ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ಎರಡು ಗುಂಪುಗಳ ಜೊತೆ ಮಾತನಾಡಿದ್ದೇನೆ. ಮೆರವಣಿಗೆ ವೇಳೆ ಯುವಕರ ಗುಂಪು ದಾಂಧಲೆ ನಡೆಸಿದೆ. ಘಟನೆಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾಗೂ ವಾಹನಗಳಿಗೆ ಹಾನಿಯಾಗಿರುವ ಕುರಿತು ದೂರ ನೀಡಲು ತಿಳಸಲಾಗಿದೆ. ಘಟನೆಯಲ್ಲಿ ನಮ್ಮ ಕೆಲ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Communal violence erupted in Shivamogga, IGP visits spot, stone pelted on 7 houses, RAP on spot, many taken to custody.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm