ಬ್ರೇಕಿಂಗ್ ನ್ಯೂಸ್
03-10-23 05:35 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂಬ ಸುಳ್ಳು ಸುದ್ಧಿ ಹರಡುತ್ತಿದೆ. ಈ ಸುದ್ಧಿ ಫಾರ್ವರ್ಡ್ ಮಾಡಿರುವ ಅಜ್ಗರ್ ಎಂಬಾತನ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಮಾಡಿರುವವರ ವಿರುದ್ಧವೂ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ರಾಗುಗುಡ್ಡ ಘರ್ಷಣೆ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಂಡಿರುವ ಎಸ್ಪಿ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವುದನ್ನು ತಿಳಿಸಿದ್ದಾರೆ. ಪೊಲೀಸ್ ಎನ್ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ. ಸುಳ್ಳು ಸುದ್ಧಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ರಾಜ್ಯದ, ಬೇರೆ ಜಿಲ್ಲೆಗಳ ವಿಡಿಯೋಗಳನ್ನು ಹರಡಲಾಗುತ್ತಿದೆ. ಅಂತಹವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು.
ರಾಗಿಗುಡ್ಡದಲ್ಲಿ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗತ್ತೆ. ಅನೇಕರು ಸುಳ್ಳು ವಿಡಿಯೋಗಳನ್ನು ಹರಡುತ್ತಿದ್ದಾರೆ. ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದುಬಂದಿದೆ. ಅಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸುಳ್ಳು ಸುದ್ಧಿ, ವಿಡಿಯೋಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ, 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಸುಳ್ಳು ಸುದ್ಧಿಗಳನ್ನು ನಂಬಬೇಡಿ. ಇನ್ನೂ ಹಲವರನ್ನು ಬಂಧಿಸಲಿದ್ದೆವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದವರು ಯಾರಿದ್ದಾರೆಂದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿದೆ. ಯಾರು ಕಾರಣಕರ್ತರಿದ್ದಾರೆ, ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
Stone pelting, Miscreants share false news as encounter in Shivamogga, SP clarifies.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm