ಬ್ರೇಕಿಂಗ್ ನ್ಯೂಸ್
03-10-23 10:37 pm Bengaluru Correspondent ಕರ್ನಾಟಕ
ಕೋಲಾರ, ಅ.3: ನನ್ನ ಜಿಲ್ಲೆಯ ಜನರ ವಿರೋಧ ಇದ್ದರೂ, ಕೋಲಾರ, ಚಿಕ್ಕಬಳ್ಳಾಪುರ ಜನರಿಗೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿದ್ದೆ. 800 ಕೋಟಿ ರೂಪಾಯಿ ಮೊತ್ತದಲ್ಲಿ ಡಿಪಿಆರ್ ತಯಾರಿಸಿ ಯೋಜನೆ ಜಾರಿ ಮಾಡಿದ್ದೆ. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಅದು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ್ದು ಬಿಟ್ಟರೆ ನೀರು ತರಲು ಮುಂದಾಗಿಲ್ಲ. ಯೋಜನೆ ಹೆಸರಲ್ಲಿ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೊರಕ್ಕೆ ತಳ್ಳಿದ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸದಾನಂದ ಗೌಡ ತನ್ನ ಸಾಧನೆಯನ್ನು ಹೇಳಿಕೊಂಡಿದ್ದಾರೆ.
ಇವತ್ತು ಕೋಲಾರದ ಜನ ಕುಡಿಯಲು ನೀರಿಲ್ಲದಿದ್ದರೂ ಹನಿ ನೀರಾವರಿ ಮೂಲಕ ಕೃಷಿ ಮಾಡಿ, ಬೆಂಗಳೂರಿನ ಜನರಿಗೆ ತರಕಾರಿ ಪೂರೈಸುತ್ತಿದ್ದಾರೆ. ಇಲ್ಲಿನ ಜನರಿಗೆ ನೀರು ಕೊಡಬೇಕೆಂದು ಎತ್ತಿನಹೊಳೆ ಯೋಜನೆಯನ್ನು ತಯಾರಿಸಿದ್ದು ನಾವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಆಡಳಿತ ನಡೆಸಿತಲ್ಲಾ.. ಯಾಕೆ ಇವರಿಗೆ ಆ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಯೋಜನೆಯನ್ನು ಜಾರಿಗೆ ತರುತ್ತಿದ್ದರೆ ಕೋಲಾರದ ಕೆರೆಗಳು ತುಂಬುತ್ತಿತ್ತಲ್ಲಾ.. ಇವರು ಆ ಯೋಜನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನ ಮಾಡಿದರು. ಜೊತೆ ಜೊತೆಗೆ ಯೋಜನೆ ಹೆಸರಲ್ಲಿ ದುಡ್ಡು ಲೂಟಿ ಹೊಡೆದಿದ್ದಾರೆ. ಕಾಂಗ್ರೆಸಿನವರು ಲೂಟಿಕೋರರು ಎಂದು ಆರೋಪಿಸಿದರು.

ಯೋಜನೆ ನಿರ್ಮಾತೃಗಳು ಡೀವಿ, ಮೊಯ್ಲಿ
2011ರಲ್ಲಿ ಕರಾವಳಿ ಜಿಲ್ಲೆಗಳ ವಿರೋಧದ ನಡುವೆಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿವಿ ಸದಾನಂದ ಗೌಡ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿದ್ದರು. ಆನಂತರ, 2012ರಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿಯೇ ಶಿಲಾನ್ಯಾಸ ಮಾಡಿ, ಮತ್ತೊಂದು ಎಡವಟ್ಟು ಮಾಡಿದ್ದರು. ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಯೋಜನೆಗೆ ಹಣ ಬಿಡುಗಡೆಗೊಳಿಸಿ, ಅನುಷ್ಠಾನಕ್ಕೆ ಯತ್ನಿಸಿದ್ದರು. ಆದರೆ ಬಹುತೇಕ ಜಲತಜ್ಞರು ಎತ್ತಿನಹೊಳೆ ಯೋಜನೆಯಿಂದ ನೀರು ಸಿಗಲ್ಲ ಎಂದು ಹೇಳಿದರೂ ಸರಕಾರ ಕೇಳಿರಲಿಲ್ಲ. ಯೋಜನೆ ಹೆಸರಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಕ್ಷ ಭೇದ ಇಲ್ಲದೆ ಹಣ ಕೊಳ್ಳೆ ಹೊಡೆದಿದ್ದು ಬಿಟ್ಟರೆ ನೀರು ಒಯ್ಯುವ ಕೆಲಸ ಮಾಡಿಲ್ಲ. ಈಗ ಅಂದಿನ ಸಿಎಂ ಸದಾನಂದ ಗೌಡ ಯಾವುದೇ ನಾಚಿಕೆ ಇಲ್ಲದೆ, ತಾನು ಜಾರಿಗೊಳಿಸಿದ್ದ ಯೋಜನೆಯ ಹೆಸರಲ್ಲಿ ಕಾಂಗ್ರೆಸಿಗರು ಲೂಟಿ ಹೊಡೆಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ಜನರನ್ನು ಪ್ರತಿ ಬಾರಿ ಮೋಸ ಮಾಡುತ್ತಿದ್ದಾರೆ.
Mangalore Sadananda Gowda talks about Yettinahole water project in kolar
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm