ಬ್ರೇಕಿಂಗ್ ನ್ಯೂಸ್
11-11-20 11:45 am Bangalore Correspondent ಕರ್ನಾಟಕ
ಬೆಂಗಳೂರು(ನ.11): ದೀಪಾವಳಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನ.13 ಮತ್ತು ನ.14ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್ ಕಾರ್ಯಾಚರಿಸುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ. ಮೈಸೂರು ರಸ್ತೆಯ ಸ್ಯಾಟಲೆಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳಲಿವೆ.



ಕೆಎಸ್ಸಾರ್ಟಿಸಿ- ಬಿಎಂಟಿಸಿ ಬಸ್ ಸಂಚಾರದಲ್ಲಿ ಉಂಟಾಗುತ್ತಾ ತೊಡಕು..?
ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ನೆರೆಯ ರಾಜ್ಯಗಳ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೊಟ್ಟಾಯಂ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ. ಅಂತೆಯೇ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಿಸಲಾಗುವುದು. ಹಬ್ಬದ ಬಳಿಕ ನ.16ರಂದು ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ಇರಲಿದೆ.
ಈ ಹೆಚ್ಚುವರಿ ಬಸ್ಗಳಲ್ಲಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶವಿದ್ದು, ನಿಗಮದ ಜಾಲತಾಣ ಹಾಗೂ ರಾಜ್ಯ ಹಾಗೂ ಹೊರರಾಜ್ಯದ 706 ಬುಕ್ಕಿಂಗ್ ಕೌಂಟರ್ಗಳಲ್ಲಿ ಮುಂಗಡ ಆಸನ ಕಾಯ್ದಿರಿಸಬಹುದು. ಪ್ರಯಾಣಿಕರು ಪ್ರಯಾಣದ ದಿನ ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೆಟ್ಗಳ ಮೇಲೆ ನಮೂದಿಸಲಾದ ಬಸ್ ನಿಲ್ದಾಣ ಅಥವಾ ಪಿಕ್ ಅಪ್ ಪಾಯಿಂಟ್ ಹೆಸರನ್ನು ಗಮನಿಸುವಂತೆ ತಿಳಿಸಲಾಗಿದೆ.
The Karnataka State Road Transport Corporation on Tuesday said it has made elaborate arrangements to run 1,000 extra buses during the Deepavali festival season.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm