ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm