ಬ್ರೇಕಿಂಗ್ ನ್ಯೂಸ್
12-10-23 04:11 pm HK News Desk ಕರ್ನಾಟಕ
ಶಿವಮೊಗ್ಗ, ಅ.12: ರಾಜ್ಯದ ಕುತಂತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯೆ ಅಥವಾ ಹಿಂದೂ ರಕ್ತ ಹರಿಯುತ್ತಿದೆಯೆ? ಈ ದೇಶದ ದೇಶದ್ರೋಹಿ ಮುಸಲ್ಮಾನರು ಅಖಂಡ ಭಾರತದ ಭೂಪಟಕ್ಕೆ ಹಸಿರು ಬಣ್ಣ ಬಳಿದಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ತಾಕತ್ತಿದ್ದರೆ ನಿಮಗೆ ಹಸಿರು ಬೇಕೋ ಏನು ಆರಿಸಿಕೊಳ್ಳಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಹೇಡಿ ಹಿಂದೂ ಸಿದ್ದರಾಮಯ್ಯ. ರಾಷ್ಟ್ರ ಭಕ್ತ ಹಿಂದೂಗಳ ರಕ್ಷಣೆ ಇವರ ಕೈಯಲ್ಲಿ ಆಗುವುದಿಲ್ಲ. ಏಕರೂಪ ನಾಗರಿಕ ಸಂಹಿತೆ ಜಾರಿ ತರಲು ಹೊರಟರೆ ಕಾಂಗ್ರೆಸ್ ಒಪ್ಪುವುದಿಲ್ಲವಂತೆ. ಈ ಕಾನೂನು ಒಪ್ಪುವುದಾದರೇ ಇಲ್ಲಿ ಇರಿ, ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ ಎಂದರು.
![]()
ಲಾಂಗು, ಮಚ್ಚು ತೋರಿಸಿದವರ ಎಷ್ಟು ಜನರ ಮೇಲೆ ಕೇಸ್ ಹಾಕಿದ್ದಿರಿ? ಹೆಣ್ಣು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿರಿ ನಾರ್ಮದಾಗಳು ನೀವು. ಮುಸ್ಲಿಮರಿಗೆ ಸಿದ್ದರಾಮಯ್ಯನವರ ರಕ್ಷಣೆಯಿದೆ. ಡಿಸಿ, ಎಸ್ಪಿ ಅವರೇ ಎಷ್ಟು ದಿನ ಕಾಂಗ್ರೆಸ್ ನ ಗುಲಾಮರಾಗುತ್ತಿರಿ? ಹರ್ಷನ ಕೊಲೆಯಾದಾಗ ನಾವು ಸಹ ಲಾಂಗು ಮಚ್ಚು ಹಿಡಿದಿದ್ದರೆ ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕುವಂತೆ ಹಾಕುತ್ತಿದ್ದೆವು, ಆದರೆ ನಾವು ಅದನ್ನು ಮಾಡಲಿಲ್ಲ. ಓಂ ಚಿತ್ರವನ್ನು ಸಿದ್ದರಾಮಯ್ಯನವರಿಗೆ ತೋರಿಸಬೇಕು. ಶಾಂತಿಯಿಂದ ಸಭೆ ಮಾಡುತ್ತಿದ್ದೇವೆ ಎಂದರು
ನಮ್ಮ ಸಮಾಜದವರನ್ನು ಮುಟ್ಟಿದರೆ ಅದೇ ಆಯುಧದಿಂದ ಉತ್ತರ ಕೊಡೋಣ. ಮುಸ್ಲಿಂ ಗೂಂಡಾಗಳು ಹರ್ಷನ ಕೊಲೆ ಮಾಡಿದ್ದಾರೆ. ನಿಮ್ಮ ಮಗ ಯತೀಂದ್ರನಿಗೆ ಕೊಲೆ ಮಾಡಿದ್ದರೆ ನಿಮಗೆ ಏನು ಅನಿಸುತ್ತಿತ್ತು? ಡಿಕೆ ಶಿವಕುಮಾರ್ ನಿಮ್ಮ ತಮ್ಮನನ್ನು ಮುಸ್ಲಿಮರು ಕೊಲೆ ಮಾಡಿದ್ದರೆ ಏನು ಅನಿಸುತ್ತಿತ್ತು ಎಂದು ಖಾರವಾಗಿ ಪ್ರಶ್ನಿಸಿದರು.
ಕನಿಷ್ಠ ಐದು ಮಕ್ಕಳಾದರೂ ಮಾಡಿಕೊಳ್ಳಿ. ನನಗೆ ಐದು ಮಕ್ಕಳು, ಎಂಟು ಮೊಮ್ಮಕ್ಕಳು. ನೀವು ಅಷ್ಟಾದರೂ ಮಾಡಿಕೊಳ್ಳಿ ಎಂದು ಈಶ್ವರಪ್ಪ ಹೇಳಿದರು.

ಮತ್ತೊಮ್ಮೆ ರಾಘಣ್ಣ ಸಂಸದರಾಗುತ್ತಾರೆ. ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ. ಹಿಂದೂ ಸಮಾಜ ರಕ್ಷಣೆ ಮಾಡುವ ಸರ್ಕಾರ ಬರುತ್ತದೆ. ಪ್ರತಿಬೂತ್ ನಲ್ಲಿ ಪ್ರಧಾನಿ ನೆನಪು ಮಾಡಬೇಕು. ರಾಘವೇಂದ್ರ ಎಂಪಿ ಆಗುವ ಮುಂಚೆ ಶಿವಮೊಗ್ಗ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ನೋಡಿ. ನಮ್ಮ ಜಿಲ್ಲೆ ಅಭಿವೃದ್ಧಿ ಹೇಗಾಗಿದೆ ಎಂದು ಅವರ ಪಕ್ಷದವರೇ ಹೇಳುತ್ತಾರೆ. ಅಖಂಡ ಭಾರತ ಜೊತೆಗೆ ಕೇಸರಿ ಭಾರತ ಮಾಡೋಣ. ಸಿದ್ದರಾಮಯ್ಯ ಕಿವುಡ, ಅವನಿಗೆ ಕೇಳಿಸುವ ಹಾಗೆ ಘೋಷಣೆ ಕೂಗಿ ಎಂದು ಏಕವಚನದಲ್ಲಿ ಟೀಕಿಸಿದರು.
KS Eshwarappa sparks controversy in Shivamogga, says make 5 children atleast for Hindu religion protection. Just as Muslims make more children even Hindus must make so. Says we must carry weapons if any Muslim touches us. Cm Siddaramaiah is in favour of only Muslims he added.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm