ಬ್ರೇಕಿಂಗ್ ನ್ಯೂಸ್
16-10-23 04:27 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಬಗ್ಗೆ ಅಭಿಪ್ರಾಯ ಕೇಳಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ಜೂನ್ 12 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ನ್ಯಾಯಪೀಠ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ. ತಡೆಯಾಜ್ಞೆ ಕಾರಣ ಕೇಂದ್ರ ತನಿಖಾ ತಂಡ ಹೆಚ್ಚಿನ ತನಿಖೆಯನ್ನು ನಿಲ್ಲಿಸಿದೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಐ ತನಿಖೆಯ ಶೇಕಡಾ 90 ರಷ್ಟು ಈಗಾಗಲೇ ಮುಗಿದಿದೆ. ಆದರೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಯಿಂದಾಗಿ ತನಿಖೆ ಮುಂದುವರಿಸುವುದಕ್ಕೆ ತೊಡಕಾಗಿದೆ. ಹೀಗಾಗಿ ಕೋರ್ಟ್ ತಡೆಯಾಜ್ಞೆ ತೆರವಿ ಮಾಡುವಂತೆ ನ್ಯಾಯಪೀಠವನ್ನು ಒತ್ತಾಯಿಸಿದರು.
ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೆ ನವೆಂಬರ್ 7ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಡಿಕೆ ಶಿವಕುಮಾರ್ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.
The Supreme Court on Monday refused to vacate the interim stay on the CBI's investigation into the disproportionate assets case against Karnataka Deputy chief minister DK Shivakumar.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm