ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm