ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm