ಬ್ರೇಕಿಂಗ್ ನ್ಯೂಸ್
19-10-23 03:58 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ರಾಜ್ಯ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು, ಶೀಘ್ರದಲ್ಲೇ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರುವುದು ಬಿಎಸ್ವೈ ಬಯಕೆಯಾಗಿತ್ತು. ಆದರೆ ಪಕ್ಷದ ಮತ್ತೊಂದು ಬಣ ಈ ಪ್ರಸ್ತಾಪಕ್ಕೆ ಹೈಕಮಾಂಡ್ ಅಂಗಳದಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಕೇಂದ್ರ ವರಿಷ್ಠರು ವಿಜಯೇಂದ್ರಗೆ ಪಟ್ಟ ಕಟ್ಟಲು ಮುಂದಾಗಿದ್ದರೂ, ಅಂತಿಮ ನಿರ್ಧಾರಕ್ಕೆ ಬಂದಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಬೆಂಬಲ ಅಗತ್ಯ ಇರುವುದರಿಂದ ವಿಜಯೇಂದ್ರ ಬದಲಿಗೆ ಹಿರಿಯ ಪುತ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸ್ಥಾನ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಬಿಎಸ್ವೈ ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಈ ರೀತಿಯ ಹೊಯ್ದಾಟ ಹಿನ್ನೆಲೆಯಲ್ಲಿ ಮೂರನೇ ವ್ಯಕ್ತಿ ಬಗ್ಗೆ ಪರಾಮರ್ಶೆ ನಡೆಸಿದ ಹೈಕಮಾಂಡ್, ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿದೆ. ಈ ನೇಮಕಕ್ಕೆ ಬಿಎಸ್ವೈ ಕೂಡ ಬೆಂಬಲಿಸುತ್ತಾರೆ. ಆರೆಸ್ಸೆಸ್ ಮತ್ತು ಸಂತೋಷ್ ಬಣವೂ ನಿರಾಕರಿಸುವುದಿಲ್ಲ ಎಂಬ ನೆಲೆಯಲ್ಲಿ ಚಿಂತನೆ ನಡೆದಿದೆ. ಒಕ್ಕಲಿಗರಾದ ಶೋಭಾ ಅಧ್ಯಕ್ಷ ಸ್ಥಾನಕ್ಕೇರಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ಯಾರಾಗ್ತಾರೆ ಎನ್ನುವ ಕುತೂಹಲ ಎದ್ದಿದೆ.
Shobha Karandlaje to be the next BJP state president of Karnataka. The BJP will get a new state president around Dasara, and with BJP Parliamentary Board member and former chief minister B S Yediyurappa affirming it will happen soon, there is much hope in the state party unit.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm