ಬ್ರೇಕಿಂಗ್ ನ್ಯೂಸ್
06-08-20 09:36 am Headline Karnataka News Network ಕರ್ನಾಟಕ
ಬೆಂಗಳೂರು, ಆ. 06: ಬಹುದೊಡ್ಡ ಸವಾಲನ್ನು ಎಳೆದುಕೊಂಡು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಾಡಿ ಮುಗಿಸಿದ್ದಾರೆ. ಕೊರೊನಾ ವೈರಸ್ ಹರಡುವ ಭಯದಲ್ಲಿ ಸುರಕ್ಷಿತವಾಗಿ ಪರೀಕ್ಷೆಗಳು ಮುಗಿದಿದ್ದವು. ಜೊತೆಗೆ ಪರೀಕ್ಷಾ ಮೌಲ್ಯಮಾಪನ ಕೂಡ ಶುರುವಾಗಿತ್ತು. ಇದೀಗ ನಾಳೆ ಎಸ್ಎಸ್ಎಲ್ ಪರೀಕ್ಷಾ ಫಲಿತಾಂಶ ಬರಲಿದೆ ಎಂಬ ಸುದ್ದಿ ಬಂದಿದೆ.
ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಾರಿ ಕೊರೊನಾ ವೈರಸ್ನಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ಇನ್ನೇನು 10ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಬೇಕು ಎಂಬ ಸಮಯದಲ್ಲಿ ಕೋವಿಡ್-19 ದಿಢೀರ್ ಹಾವಳಿ ಶುರುಮಾಡಿತ್ತು. ಮುಂದುವರೆದ ಅಮೆರಿಕ, ಇಟಲಿ, ಚೀನಾ ಹಾಗೂ ಇಂಗ್ಲಂಡ್ ನಂತಹ ದೇಶಗಳೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸಿ ಹೋಗಿದ್ದವು. ಆತಂಕದ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮುಗಿಸಿದ್ದಾರೆ.
ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾಥಿಗಳು ಪರೀಕ್ಷೆಯನ್ನು ಬರೆದಿದ್ದರು. ಪರೀಕ್ಷಾ ಸಂದರ್ಭದಲ್ಲಿ 33 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಅವರಿಗೆ ಪರೀಕ್ಷೆಯನ್ನು ನಿರಾಕರಿಸಿ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಅವಕಾಶವನ್ನ ಕಲ್ಪಿಸಲಾಗುತ್ತಿದೆ.

ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ:
ಇದೀಗ ನಾಳೆ (ಆ. 07) ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ಬಂದಿದೆ. ಅದಕ್ಕೆ ಸ್ಪಷ್ಟನೆ ಕೊಟ್ಟಿರುವ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಫಲಿತಾಂಶ ಪ್ರಕಟ ಮಾಡಲು ಇನ್ನೂ ದಿನಾಂಕ ನಿಶ್ಚಯವಾಗಿಲ್ಲ. ಅಧಿಕೃತವಾಗಿ ಶಿಕ್ಷಣ ಇಲಾಖೆ ಸಮಗ್ರ ಮಾಹಿತಿಯನ್ನು ಕೊಡಲಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟದ ಸುದ್ದಿ ಸುಳ್ಳು ಎಂದಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm