ಬ್ರೇಕಿಂಗ್ ನ್ಯೂಸ್
26-10-23 04:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.26: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಸಚಿವಾಲಯ ಝೆಡ್ ಕೆಟಗರಿಯ ಕೇಂದ್ರ ಮೀಸಲು ಪೊಲೀಸ್ ಪಡೆಯ ಭದ್ರತೆಯನ್ನು ನೀಡಿದೆ.
ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಭದ್ರತೆ ಒದಗಿಸಲಾಗುವುದು. ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಶೀಘ್ರದಲ್ಲೇ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ. ಯಡಿಯೂರಪ್ಪ ಅವರಿಗೆ ಬೆದರಿಕೆ ಇರುವ ಬಗ್ಗೆ ವರದಿಯನ್ನು ಗುಪ್ತಚರ ಇಲಾಖೆಯಿಂದ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಹಂಚಿಕೊಂಡಿದೆ ಎನ್ನುವ ಮಾಹಿತಿಯಿದೆ.
ಮೂಲಗಳ ಪ್ರಕಾರ, ಕರ್ನಾಟಕದ ಮೂಲಭೂತವಾದಿ ಗುಂಪುಗಳಿಂದ ಯಡಿಯೂರಪ್ಪ ಅವರಿಗೆ ಅಪಾಯವಿದೆ. ಸಿಆರ್ಪಿಎಫ್ ಕಮಾಂಡೋಗಳು ಹಿರಿಯ ಬಿಜೆಪಿ ನಾಯಕನಿಗೆ ಕರ್ನಾಟಕದಲ್ಲಿ ಇರುವಾಗ ಮತ್ತು ರಾಜ್ಯಾದ್ಯಂತ ಅವರು ಸಂಚರಿಸುವ ಸಮಯದಲ್ಲಿ ಭದ್ರತೆಯನ್ನು ಒದಗಿಸಲಿದ್ದಾರೆ.
ಇತ್ತೀಚೆಗೆ ಯಡಿಯೂರಪ್ಪ ಅವರು ಇತರ ರಾಜ್ಯ ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಘೋಷಿಸಿದ್ದರು. 2024ರ ಲೋಕಸಭೆ ಚುನಾವಣೆಗೆ ಪಕ್ಷ ಬಲಪಡಿಸಲು ಸಂಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿತ್ತು. ಇದರ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಬಗ್ಗೆ ಗೊಂದಲ ಎದ್ದಿದೆ. ವಿಜಯೇಂದ್ರ ಬದಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗುತ್ತಿರುವ ಬಿಎಸ್ ಯಡಿಯೂರಪ್ಪ ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.
The Ministry of Home Affairs (MHA) has accorded Z category Central Reserve Police Force (CRPF) security cover to BJP leader and former chief minister of Karnataka BS Yediyurappa. Yediyurappa will be provided the security cover only in Karnataka and the CRPF personnel will soon take charge of the new responsibility.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm