ಬ್ರೇಕಿಂಗ್ ನ್ಯೂಸ್
01-11-23 12:17 pm Bangalore Correspondent ಕರ್ನಾಟಕ
ಬೆಂಗಳೂರು, ನ.01: ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಗರದ ಕಂಠೀರವ ಸ್ಟೇಡಿಯಂನಲ್ಲಿ ಇಂದು ಹಮ್ಮಿಕೊಂಡಿರುವ 68ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಕ್ರೀಡಾಂಗಣದ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ. ಸಮಾರಂಭಕ್ಕೆ ಅನೇಕ ಮಂದಿ ಆಗಮಿಸಿರುವುದರಿಂದ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದು, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಎಂ.ಚಂದ್ರಶೇಖರ್ ಮತ್ತು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು" ಎಂದು ಹೇಳಿದ್ದಾರೆ.
Karnataka CM Siddaramaiah hoists Karnataka flag for 68th Karnataka Rajyotsava 2023.Karnataka Chief Minister Siddaramaiah on Wednesday took part in the 68th Karnataka Rajyotsava celebrations and hoisted the national flag at Kanteerava Stadium in Bengaluru.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm