ಬ್ರೇಕಿಂಗ್ ನ್ಯೂಸ್
02-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ರಾಜ್ಯದಲ್ಲಿ ಕಾಂಗ್ರೆಸ್ ಆಂತರಿಕ ಭಿನ್ನಮತ ತೀವ್ರಗೊಂಡ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ದಿಢೀರ್ ಎಂಟ್ರಿ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ್ದು ರಾಜ್ಯ ಕಾಂಗ್ರೆಸ್ ನಾಯಕರಿಗೆ ವಾರ್ನಿಂಗ್ ಮಾಡಿದ್ದಾರೆ.
ಸರ್ಕಾರ ರಚನೆಯಾಗಿ ಐದು ತಿಂಗಳಾಗುತ್ತಿದ್ದಂತೆ ನಾಯಕರು ಬಣಗಳನ್ನು ಸೃಷ್ಟಿಸಿಕೊಂಡಿದ್ದು ಸಂಪುಟ ಪುನಾರಚನೆ ಬೇಡಿಕೆ ತೀವ್ರಗೊಳಿಸಿದ್ದು ಮತ್ತೊಂದೆಡೆ ಸಿಎಂ ಬದಲಾವಣೆ ವಿಚಾರದಲ್ಲಿ ಚರ್ಚೆಗಳು ಮುನ್ನೆಲೆಗೆ ಬಂದಿರುವುದು ಹೈಕಮಾಂಡ್ ತಲೆನೋವಿಗೆ ಕಾರಣವಾಗಿತ್ತು. ಇದಲ್ಲದೆ, ಬೆಳಗಾವಿ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪ ವಿಚಾರವಾಗಿ ಸತೀಶ್ ಜಾರಕಿಹೊಳಿ ಮತ್ತು ಬೆಂಬಲಿಗರ ಅಸಮಾಧಾನ ತೀವ್ರಗೊಂಡಿತ್ತು.
ಇದರ ಜೊತೆಗೆ ನಿಗಮ ಮಂಡಳಿ ನೇಮಕಾತಿ ಕುರಿತಾಗಿಯೂ ಒಮ್ಮತದ ಅಭಿಪ್ರಾಯ ಸಿಎಂ ಹಾಗೂ ಡಿಸಿಎಂ ನಡುವೆ ಬರಲು ಸಾಧ್ಯವಾಗಿಲ್ಲ. ಈ ಎಲ್ಲಾ ಬೆಳವಣಿಗೆಗಳ ನಡುವೆ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಸಿ ವೇಣುಗೋಪಾಲ್ ದಿಢೀರ್ ರಾಜ್ಯಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೆ ಸಭೆ ನಡೆಸಿದ್ದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಪಕ್ಷ ಮತ್ತು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವಂತೆ ಮಾತನಾಡಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಎಂದು ಸಂದೇಶ ರವಾನಿಸಿದ್ದಾರೆ. ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರಕಾರದ ಕಾರ್ಯ ವೈಖರಿ ಬಗ್ಗೆ ಮಾತನಾಡಲೇ ಬೇಕಾದ ಸಂಗತಿಗಳಿದ್ದರೆ ಸಿಎಂ ಅಥವಾ ಡಿಸಿಎಂ ಅಥವಾ ನನ್ನ ಜೊತೆಗೆ ನೇರವಾಗಿ ಚರ್ಚಿಸಿ. ಸಾರ್ವಜನಿಕವಾಗಿ ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ನಿಶ್ಚಿತ ಎಂದು ರಣದೀಪ್ ಸುರ್ಜೇವಾಲಾ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆಗೆ ತಯಾರಾಗುತ್ತಿರುವ ಸಂದರ್ಭದಲ್ಲಿ ನಾಯಕರ ಎಡವಟ್ಟಿನ ಹೇಳಿಕೆಗಳು ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.
The Congress high command stepped in Wednesday to de-escalate the camp war between Chief Minister Siddaramaiah and his deputy DK Shivakumar by sternly asking Cabinet members and MLAs to stop commenting on the party’s internal matters.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm