ಬ್ರೇಕಿಂಗ್ ನ್ಯೂಸ್
02-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ರಾಜ್ಯದಲ್ಲಿ ಕಾಂಗ್ರೆಸ್ ಆಂತರಿಕ ಭಿನ್ನಮತ ತೀವ್ರಗೊಂಡ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ದಿಢೀರ್ ಎಂಟ್ರಿ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ್ದು ರಾಜ್ಯ ಕಾಂಗ್ರೆಸ್ ನಾಯಕರಿಗೆ ವಾರ್ನಿಂಗ್ ಮಾಡಿದ್ದಾರೆ.
ಸರ್ಕಾರ ರಚನೆಯಾಗಿ ಐದು ತಿಂಗಳಾಗುತ್ತಿದ್ದಂತೆ ನಾಯಕರು ಬಣಗಳನ್ನು ಸೃಷ್ಟಿಸಿಕೊಂಡಿದ್ದು ಸಂಪುಟ ಪುನಾರಚನೆ ಬೇಡಿಕೆ ತೀವ್ರಗೊಳಿಸಿದ್ದು ಮತ್ತೊಂದೆಡೆ ಸಿಎಂ ಬದಲಾವಣೆ ವಿಚಾರದಲ್ಲಿ ಚರ್ಚೆಗಳು ಮುನ್ನೆಲೆಗೆ ಬಂದಿರುವುದು ಹೈಕಮಾಂಡ್ ತಲೆನೋವಿಗೆ ಕಾರಣವಾಗಿತ್ತು. ಇದಲ್ಲದೆ, ಬೆಳಗಾವಿ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪ ವಿಚಾರವಾಗಿ ಸತೀಶ್ ಜಾರಕಿಹೊಳಿ ಮತ್ತು ಬೆಂಬಲಿಗರ ಅಸಮಾಧಾನ ತೀವ್ರಗೊಂಡಿತ್ತು.
ಇದರ ಜೊತೆಗೆ ನಿಗಮ ಮಂಡಳಿ ನೇಮಕಾತಿ ಕುರಿತಾಗಿಯೂ ಒಮ್ಮತದ ಅಭಿಪ್ರಾಯ ಸಿಎಂ ಹಾಗೂ ಡಿಸಿಎಂ ನಡುವೆ ಬರಲು ಸಾಧ್ಯವಾಗಿಲ್ಲ. ಈ ಎಲ್ಲಾ ಬೆಳವಣಿಗೆಗಳ ನಡುವೆ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಸಿ ವೇಣುಗೋಪಾಲ್ ದಿಢೀರ್ ರಾಜ್ಯಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೆ ಸಭೆ ನಡೆಸಿದ್ದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಪಕ್ಷ ಮತ್ತು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವಂತೆ ಮಾತನಾಡಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಎಂದು ಸಂದೇಶ ರವಾನಿಸಿದ್ದಾರೆ. ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರಕಾರದ ಕಾರ್ಯ ವೈಖರಿ ಬಗ್ಗೆ ಮಾತನಾಡಲೇ ಬೇಕಾದ ಸಂಗತಿಗಳಿದ್ದರೆ ಸಿಎಂ ಅಥವಾ ಡಿಸಿಎಂ ಅಥವಾ ನನ್ನ ಜೊತೆಗೆ ನೇರವಾಗಿ ಚರ್ಚಿಸಿ. ಸಾರ್ವಜನಿಕವಾಗಿ ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ನಿಶ್ಚಿತ ಎಂದು ರಣದೀಪ್ ಸುರ್ಜೇವಾಲಾ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆಗೆ ತಯಾರಾಗುತ್ತಿರುವ ಸಂದರ್ಭದಲ್ಲಿ ನಾಯಕರ ಎಡವಟ್ಟಿನ ಹೇಳಿಕೆಗಳು ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.
The Congress high command stepped in Wednesday to de-escalate the camp war between Chief Minister Siddaramaiah and his deputy DK Shivakumar by sternly asking Cabinet members and MLAs to stop commenting on the party’s internal matters.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm