ಬ್ರೇಕಿಂಗ್ ನ್ಯೂಸ್
02-11-23 08:35 pm HK News Desk ಕರ್ನಾಟಕ
ಹೊಸಪೇಟೆ, ನ.2: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಇತ್ಯಾದಿ ವಿಚಾರದಲ್ಲಿ ಯಾರು ಕೂಡ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ ಒಂದೇ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ‘ಐದು ವರ್ಷ ನೀವೇನಾ ಸಿಎಂ’ ಎನ್ನುವ ಪ್ರಶ್ನೆಗೆ ಉತ್ತರಿಸಿ ‘ನಾನೇ ಮುಂದುವರೆಯುವೆ’ ಎಂದು ಹೇಳಿದ್ದಾರೆ. ‘ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ’ ಎಂದರು.
ಡಿಸಿಎಂ ವಿಚಾರ ತಿರ್ಮಾನ ಮಾಡುವುದು ಹೈಕಮ್ಯಾಂಡ್ಗೆ ಬಿಟ್ಟದ್ದು. ನಮ್ಮದು ರಾಷ್ಟ್ರೀಯ ಪಕ್ಷ. ಏನೆ ತೀರ್ಮಾನವಾದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ತೆಗೆದುಕೊಳ್ಳುವುದು ಎಂದರು.
ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಸೋತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ ಎಂದರು
ಬಿಜೆಪಿಗರು ಭ್ರಮನಿರಸನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಅಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
Karnataka Chief Minister Siddaramaiah on Thursday asserted that he would hold the office for a full five years. The clarification came in the wake of speculation within a section of the ruling Congress about a change in leadership after two-and-half years of this government’s tenure.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm