ಬ್ರೇಕಿಂಗ್ ನ್ಯೂಸ್
03-11-23 02:33 pm HK News Desk ಕರ್ನಾಟಕ
ಮೈಸೂರು, ನ.03: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು. ಈ ನಡುವೆ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂಬ ಹೇಳಿಕೆ ವೈಯಕ್ತಿಕವಾದುದು. ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಎಂದರೆ ನಾನೂ ಸಿಎಂ ಆಗಲು ಸಿದ್ಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮೈಸೂರಿನಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಪ್ರಿಯಾಂಕ್ ಖರ್ಗೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದರು.
ಸಿಎಂ ಅಧಿಕಾರ ಹಂಚಿಕೆ ವಿಚಾರ ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದಲ್ಲಿ ಸ್ಪಷ್ಟತೆ ಇದೆ. ಸಿಎಂ ಅವರ ನಿನ್ನೆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ, ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯವನ್ನು ಹೇಳಲು ಸ್ವಾತಂತ್ರ್ಯವಿದೆ. ಇದರಲ್ಲಿ ತಪ್ಪೇನೂ ಇಲ್ಲ. ಆದರೆ ಹೇಳಿಕೆಗಳು ಕಲ್ಲಿನಿಂದ ಬರೆದ ಶಾಸನವಲ್ಲ. ಎಲ್ಲವೂ ಪಕ್ಷದ ಹೈ ಕಮಾಂಡ್ಗೆ ಬಿಟ್ಟದ್ದು ಎಂದು ಸಚಿವ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ ವಿರುದ್ಧ ವಾಗ್ಧಾಳಿ
ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ. ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪಿಪಿಲ್ ಲೆಸ್ ಪಾರ್ಟಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಯಡಿಯೂರಪ್ಪ ಅವರು ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಕುರಿತು ಹೇಳಿದರು.
Karnataka IT minister and Congress chief Mallikarjun Kharge's son Priyank Kharge has said he would agree to take the chief ministerial post in the state if the party high command asks him to.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm