ಬ್ರೇಕಿಂಗ್ ನ್ಯೂಸ್
05-11-23 06:22 pm HK News Desk ಕರ್ನಾಟಕ
ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.


ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am