ಬ್ರೇಕಿಂಗ್ ನ್ಯೂಸ್
09-11-23 10:49 pm Bangalore Correspondent ಕರ್ನಾಟಕ
ಬೆಂಗಳೂರು, ನ.9: ಅಂತೂ ಇಂತೂ ಬಿಜೆಪಿಯ ಸಂತೋಷ ಕೂಟದ ಆಟ ಗೆಲುವಿನತ್ತ ಸಾಗುತ್ತಿದೆ, ಬಿಜೆಪಿಯನ್ನು ಸಂಪೂರ್ಣ ಹಿಡಿತಕ್ಕೆ ಪಡೆಯುವ ಪಕ್ವ ಕಾಲ ಬಂದಿದೆ. ಲಿಂಗಾಯತ ನಾಯಕ ಯಡಿಯೂರಪ್ಪರನ್ನು ಮೂಲೆಯಲ್ಲಿ ಕೂರಿಸಿದ್ದಾಯ್ತು. ಹಿಂದುಳಿದ ವರ್ಗದ ಈಶ್ವರಪ್ಪರನ್ನು ಬಲವಂತವಾಗಿ ರಿಟೈರ್ಡ್ ಮಾಡಿದ್ದಾಯ್ತು.
ಈಗ ಒಕ್ಕಲಿಗ ಸದಾನಂದಗೌಡರೂ ಹೈಕಮಾಂಡ್ ನಿಂದ ಅವಮಾನಕ್ಕೊಳಗಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಸಂತೋಷ ಕೂಟದ ಕಲ್ಲೇಟಿಗೆ ಎಲ್ಲಾ ಹಕ್ಕಿಗಳೂ ಉದುರಿ ಬೀಳುತ್ತಿವೆ! ಕುಮಾರಸ್ವಾಮಿಯವರು ಹೇಳಿದಂತೆ ಇನ್ಮುಂದೆ ಬಿಜೆಪಿಯಲ್ಲಿ ಪೇಶ್ವೆ ವಂಶಸ್ಥರದ್ದೇ ಪಾರುಪತ್ಯ.! ಹೀಗೆಂದು ರಾಜ್ಯ ಕಾಂಗ್ರೆಸ್, ಬಿಜೆಪಿ ನಾಯಕರನ್ನು ಕಾಲೆಳೆಯುವ ಯತ್ನ ಮಾಡಿದೆ.

ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳಿಸಿದ್ದರಿಂದ ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. "ಸಂತೋಷ ಕೂಟ"ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ. ಎಲ್ಲಾ ತಲೆಗಳನ್ನೂ ಉರುಳಿಸಿ "ನಾಯಕತ್ವ ಮುಕ್ತ ಬಿಜೆಪಿ" ಮಾಡುವಲ್ಲಿ ಸಂತೋಷ ಕೂಟ ಯಶಸ್ವಿಯಾಗಿದೆ.
ಹರಿದ ಪಂಚೆಯಂತಾಗಿರುವ ಬಿಜೆಪಿಯಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ, ವಲಸಿಗರಿಗೆ ಆಪರೇಷನ್ ಕಮಲ ಮಾಡುವಾಗ ಜಾಮೂನ್ ಕೊಟ್ಟ ಬಿಜೆಪಿ ಈಗ ವಿಷ ಕೊಡುತ್ತಿದೆಯಂತೆ, ಹೀಗೆ ಹೇಳಿದ್ದು ಸ್ವತಃ ಬಿಜೆಪಿಯ ಎಸ್ ಟಿ ಸೋಮಶೇಖರ್! ಬಿಜೆಪಿ ಕಚೇರಿಯಲ್ಲಿ ಯಾರು ಯಾರಿಗೆ ವಿಷ ಬೆರೆಸುತ್ತಿದ್ದಾರೋ, ಮದ್ದು ಅರೆಯುತ್ತಿದ್ದಾರೋ! ಇತ್ತ ಕೆ ಎಸ್ ಈಶ್ವರಪ್ಪ ಎಂಬ ಕೆಲಸವಿಲ್ಲದ ರಿಟೈರ್ಡ್ ರಾಜಕಾರಿಣಿ ವಲಸಿಗರ ವಿರುದ್ಧ ನಾಲಿಗೆ ಮಸೆಯುತ್ತಿದ್ದಾರೆ. ಒಟ್ಟಿನಲ್ಲಿ #BJPvsBJP ಕಿತ್ತಾಟ ಎಂಬುದು ಮುಗಿಯದ ಧಾರಾವಾಹಿ!
ಜೆಡಿಎಸ್, ಬಿಜೆಪಿ ಮೈತ್ರಿ ಬಿಜೆಪಿ ನಾಯಕರಿಗೆ, ಜೆಡಿಎಸ್ ಶಾಸಕರಿಗೆ "ಒಲ್ಲದ ಸಂಸಾರ ಒತ್ತಾಯದ ಬಾಳ್ವೆ"ಯಂತಾಗಿದೆ. ಜೆಡಿಎಸ್ ಶಾಸಕರು ಬಿಜೆಪಿಯೊಂದಿಗಿನ ಮೈತ್ರಿ ಆತ್ಮಹತ್ಯೆಗೆ ಸಮ ಎಂದು ತಿಳಿದಿದ್ದಾರೆ, ಇತ್ತ ಬಿಜೆಪಿ ನಾಯಕರು ಕುಮಾರಸ್ವಾಮಿ ನಮ್ಮ ಜಾಗವನ್ನು ಅತಿಕ್ರಮಿಸಿಸುತ್ತಿದ್ದಾರೆ ಎಂದು ಒಳಗೊಳಗೇ ಕೈ ಹಿಸುಕುತ್ತಿದ್ದಾರೆ.
ಶರಣಗೌಡ ಕಂದನೂರು ಹಾಗೂ ಸದಾನಂದಗೌಡರ ಮಾತುಗಳಲ್ಲೇ ಈ ಸಂಗತಿ ಬೆಳಕಿಗೆ ಬಂದಿದೆ. ಒಟ್ಟಿನಲ್ಲಿ ಮೈತ್ರಿಗೆ ಖಾತ್ರಿ ಇಲ್ಲದೆ ಕತ್ತರಿ ಬೀಳುವ ಕಾಲ ಸನ್ನಿಹಿತವಾಗಿದೆ ಎಂದು ಟ್ವೀಟ್ ಮೂಲಕ ಟೀಕೆ ಮಾಡಿದೆ.
The BJP's party game is heading for victory and the time has come to take full control of the BJP. Lingayat leader BS Yediyurappa was made to sit in a corner. Eshwarappa, who belongs to the backward class, was forcibly retired.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm