ಬ್ರೇಕಿಂಗ್ ನ್ಯೂಸ್
10-11-23 01:39 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಚರ್ಚೆ ನಡೆಸಿದರು.
ಮಂಗಳೂರು - ಬೆಂಗಳೂರು ಹಸಿರುವ ವಲಯ ಹೈ ಸ್ಪೀಡ್ ಕಾರಿಡಾರ್ ಮಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ಮಾರ್ಗ ಮಧ್ಯೆ ಬರುವ ಇತರ ನಗರಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. 6 ರಿಂದ 8 ಲೈನ್ ಹೈಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಪ್ರಾರಂಭಿಕ ಹಂತವಾಗಿ ಸಚಿವರೊಂದಿಗೆ ಸಂಸ್ಥೆಯ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೈ ಸ್ಪೀಡ್ ಕಾರಿಡಾರ್ ಮಂಗಳೂರಿಗೆ ಹೆಚ್ಚಿನ ಬಂಡವಾಳವನ್ನ ತರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರಿಡಾರ್ ರಸ್ತೆ ಮಂಗಳೂರು ಪೋರ್ಟ್ ಗೂ ಕನೆಕ್ಟ್ ಮಾಡುವುದರಿಂದ ವ್ಯಾಪಾರ ಉದ್ಯಮಗಳ ಬೆಳವಣಿಗೆಗೆ ನೆರವಾಗಲಿದೆ ಎಂದರು.
ಕಾರಿಡಾರ್ ರೋಡ್ ಮ್ಯಾಪ್ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭರವಸೆ ನೀಡಿದರು. ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನ ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The head of The European Institute of Business and Technology held discussions with Dakshina Kannada district in-charge minister Dinesh Gundu Rao and Udupi district in-charge minister Lakshmi Hebbalkar on the construction of mangaluru integrated greenfield high-speed corridor.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm