ಬ್ರೇಕಿಂಗ್ ನ್ಯೂಸ್
11-11-23 07:00 pm HK News Desk ಕರ್ನಾಟಕ
ಮಂಜೇಶ್ವರ, ನ.11: ಕರ್ನಾಟಕ ಗಡಿಭಾಗ ತಲಪಾಡಿಯಿಂದ ಕೇರಳದ ಕಾಸರಗೋಡಿನಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಇದೇ ವೇಳೆ, ತಲಪಾಡಿ, ಮಂಜೇಶ್ವರ ಭಾಗದಲ್ಲಿ ಬಹುತೇಕ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು ಹೊಸ ರಸ್ತೆಯಲ್ಲಿ ಬಸ್ಸು, ಇನ್ನಿತರ ವಾಹನಗಳು ಓಡಾಟ ಆರಂಭಿಸಿವೆ. ಆದರೆ ಇಲ್ಲೊಬ್ಬರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸಿಗೆ ಅಡ್ಡಲಾಗಿ ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿರುವ ಪ್ರಸಂಗದ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹೊಸ ಹೆದ್ದಾರಿಯ ಮಧ್ಯದಲ್ಲೇ ಸಾಗುತ್ತಿತ್ತು. ಬಸ್ ಇಕ್ಕೆಲದಲ್ಲಿ ನಿರ್ಮಿಸಿರುವ ಸರ್ವಿಸ್ ರಸ್ತೆಯಲ್ಲಿ ಸಾಗದೇ ಇದ್ದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಕುಂಜತ್ತೂರಿನ ಉದ್ಯಮಿ ಹಸೈನಾರ್ ಎಂಬವರು ರಸ್ತೆ ಮಧ್ಯೆ ಸ್ಟೂಲ್ ಇಟ್ಟು ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಿನಿಮೀಯ ಶೈಲಿಯಲ್ಲಿ ಆ ವ್ಯಕ್ತಿ ಕುರ್ಚಿಯಿಂದ ಎದ್ದು ಬಸ್ಸಿನ ಎದುರಿನಲ್ಲಿ ನಡೆದು ಸಾಗುವ ವಿಡಿಯೋ ಜನಮೆಚ್ಚುಗೆ ಗಳಿಸಿದೆ.




ತಲಪಾಡಿಯಿಂದ ಕಾಸರಗೋಡು- ಕಣ್ಣೂರಿನ ವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಲ್ಲಿ ನಡುವೆ ಸಾಗುವ ವಾಹನಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಸಾಗುವಂತೆ ಪ್ರತ್ಯೇಕ ರಸ್ತೆಯನ್ನು ಮಾಡಲಾಗಿದೆ. ಇದರಿಂದಾಗಿ ಸ್ಥಳೀಯ ಪ್ರಯಾಣಿಕರು, ಜನಸಾಮಾನ್ಯರು ಹೆದ್ದಾರಿಯನ್ನು ಆಚೀಚೆ ದಾಟುವುದಕ್ಕೂ ಆಗಲ್ಲ. ಒಂದೆಡೆ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದ್ದರೂ, ನೇರವಾಗಿ ಸಾಗುವ ವಾಹನ ಪ್ರಯಾಣಿಕರಿಗೆ ಯಾವುದೇ ಕಿರಿಕಿರಿ ಇಲ್ಲದೆ ಸಾಗಬಹುದಾಗಿದೆ. ಸ್ಥಳೀಯ ವಾಹನಗಳು, ಸಾರಿಗೆ ಬಸ್ ಗಳು ಸಾಗುವುದಕ್ಕೆ ಸರ್ವಿಸ್ ರಸ್ತೆಯನ್ನು ಮಾಡಲಾಗಿದೆ. ಆದರೆ ಕೆಲವೊಮ್ಮೆ ನೇರ ರಸ್ತೆಯಲ್ಲೇ ಬಸ್ಸುಗಳು ಸಾಗುವುದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಈ ರೀತಿ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ.
Kasargod man sits on chair in the middle of National Highway between Mangalore and kerala.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm