ಬ್ರೇಕಿಂಗ್ ನ್ಯೂಸ್
11-11-23 07:00 pm HK News Desk ಕರ್ನಾಟಕ
ಮಂಜೇಶ್ವರ, ನ.11: ಕರ್ನಾಟಕ ಗಡಿಭಾಗ ತಲಪಾಡಿಯಿಂದ ಕೇರಳದ ಕಾಸರಗೋಡಿನಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಇದೇ ವೇಳೆ, ತಲಪಾಡಿ, ಮಂಜೇಶ್ವರ ಭಾಗದಲ್ಲಿ ಬಹುತೇಕ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು ಹೊಸ ರಸ್ತೆಯಲ್ಲಿ ಬಸ್ಸು, ಇನ್ನಿತರ ವಾಹನಗಳು ಓಡಾಟ ಆರಂಭಿಸಿವೆ. ಆದರೆ ಇಲ್ಲೊಬ್ಬರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸಿಗೆ ಅಡ್ಡಲಾಗಿ ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿರುವ ಪ್ರಸಂಗದ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹೊಸ ಹೆದ್ದಾರಿಯ ಮಧ್ಯದಲ್ಲೇ ಸಾಗುತ್ತಿತ್ತು. ಬಸ್ ಇಕ್ಕೆಲದಲ್ಲಿ ನಿರ್ಮಿಸಿರುವ ಸರ್ವಿಸ್ ರಸ್ತೆಯಲ್ಲಿ ಸಾಗದೇ ಇದ್ದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಕುಂಜತ್ತೂರಿನ ಉದ್ಯಮಿ ಹಸೈನಾರ್ ಎಂಬವರು ರಸ್ತೆ ಮಧ್ಯೆ ಸ್ಟೂಲ್ ಇಟ್ಟು ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಿನಿಮೀಯ ಶೈಲಿಯಲ್ಲಿ ಆ ವ್ಯಕ್ತಿ ಕುರ್ಚಿಯಿಂದ ಎದ್ದು ಬಸ್ಸಿನ ಎದುರಿನಲ್ಲಿ ನಡೆದು ಸಾಗುವ ವಿಡಿಯೋ ಜನಮೆಚ್ಚುಗೆ ಗಳಿಸಿದೆ.




ತಲಪಾಡಿಯಿಂದ ಕಾಸರಗೋಡು- ಕಣ್ಣೂರಿನ ವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಲ್ಲಿ ನಡುವೆ ಸಾಗುವ ವಾಹನಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಸಾಗುವಂತೆ ಪ್ರತ್ಯೇಕ ರಸ್ತೆಯನ್ನು ಮಾಡಲಾಗಿದೆ. ಇದರಿಂದಾಗಿ ಸ್ಥಳೀಯ ಪ್ರಯಾಣಿಕರು, ಜನಸಾಮಾನ್ಯರು ಹೆದ್ದಾರಿಯನ್ನು ಆಚೀಚೆ ದಾಟುವುದಕ್ಕೂ ಆಗಲ್ಲ. ಒಂದೆಡೆ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದ್ದರೂ, ನೇರವಾಗಿ ಸಾಗುವ ವಾಹನ ಪ್ರಯಾಣಿಕರಿಗೆ ಯಾವುದೇ ಕಿರಿಕಿರಿ ಇಲ್ಲದೆ ಸಾಗಬಹುದಾಗಿದೆ. ಸ್ಥಳೀಯ ವಾಹನಗಳು, ಸಾರಿಗೆ ಬಸ್ ಗಳು ಸಾಗುವುದಕ್ಕೆ ಸರ್ವಿಸ್ ರಸ್ತೆಯನ್ನು ಮಾಡಲಾಗಿದೆ. ಆದರೆ ಕೆಲವೊಮ್ಮೆ ನೇರ ರಸ್ತೆಯಲ್ಲೇ ಬಸ್ಸುಗಳು ಸಾಗುವುದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಈ ರೀತಿ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ.
Kasargod man sits on chair in the middle of National Highway between Mangalore and kerala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am