ಬ್ರೇಕಿಂಗ್ ನ್ಯೂಸ್
11-11-23 07:35 pm Bangalore Correspondent ಕರ್ನಾಟಕ
ಬೆಂಗಳೂರು, ನ.11: ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ ಬೆನ್ನಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಾರಾಗುತ್ತಾರೆ ಎಂಬ ಕುತೂಹಲ ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೊಸ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನ.17ರಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದಿದ್ದಾರೆ.
ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ದೂರವಾಣಿ ಕರೆ ಮಾಡಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಆಶೀರ್ವಾದ ಪಡೆದಿದ್ದೇನೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದೇನೆ. ನ.17ರಂದು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಸೂಚಿಸಿದ್ದಾರೆ. ಕೇಂದ್ರದ ವೀಕ್ಷಕರೂ ಸಭೆಗೆ ಆಗಮಿಸಲಿದ್ದು ಎಲ್ಲ ಶಾಸಕರ ಅಭಿಪ್ರಾಯ ಪಡೆದು ನೂತನ ನಾಯಕನ ಆಯ್ಕೆ ಮಾಡಲಾಗುವುದು ಎಂದು ವಿಜಯೇಂದ್ರ ತಿಳಿಸಿದ್ದಾರೆ.


ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರು ಕೇಳಿಬರುತ್ತಿದ್ದರೂ, ಲಿಂಗಾಯತ ಸಮುದಾಯದ ವಿಜಯೇಂದ್ರ ಅಧ್ಯಕ್ಷನಾಗಿ ನೇಮಕ ಆಗಿರುವುದರಿಂದ ಪ್ರತಿಪಕ್ಷ ನಾಯಕನ ಆಯ್ಕೆಗೆ ಲೆಕ್ಕಾಚಾರ ಬದಲಾಗಲಿದೆ. ಹಿಂದಿನ ಸರಕಾರದಲ್ಲಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರೆ, ಈಗ ಅದೇ ಸಮುದಾಯದ ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮುದಾಯ ಹೊರತುಪಡಿಸಿ ಅನ್ಯ ಸಮುದಾಯದ ಪ್ರಭಾವಿ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ.
ಜೆಡಿಎಸ್, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಬೆಂಬಲಿಸಿರುವುದರಿಂದ ಅದರ ಶಾಸಕಾಂಗ ಪಕ್ಷದ ನಾಯಕನಾಗಿ ಎಚ್ ಡಿ ಕುಮಾರಸ್ವಾಮಿ ಒಕ್ಕಲಿಗರೇ ಇದ್ದಾರೆ. ಹಾಗಾಗಿ ಮೈತ್ರಿ ಪಕ್ಷ ಬಿಜೆಪಿಯಲ್ಲಿ ಅದೇ ಸಮುದಾಯದ ಮತ್ತೊಬ್ಬ ವ್ಯಕ್ತಿ ವಿಪಕ್ಷ ನಾಯಕನಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಈ ಸ್ಥಾನಕ್ಕೆ ಹಿಂದುಳಿದ ವರ್ಗ ಅಥವಾ ಪರಿಶಿಷ್ಟ ವರ್ಗದ ಪ್ರಭಾವಿ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ. ವಿಧಾನ ಪರಿಷತ್ತಿನಲ್ಲಿ ಕಳೆದ ಬಾರಿ ಹಿರಿಯ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇದ್ದರು. ವಿಧಾನಸಭೆಗೆ ಯಾರನ್ನು ನೇಮಕ ಮಾಡುತ್ತಾರೆ ಅದನ್ನು ಆಧರಿಸಿ ಕೋಟ ಸ್ಥಾನ ನಿರ್ಧಾರವಾಗಲಿದೆ. ವಿಧಾನಸಭೆ ನಾಯಕನಾಗಿ ಹಿಂದುಳಿದ ವರ್ಗದಲ್ಲಿ ಸುನಿಲ್ ಕುಮಾರ್ ಗೆ ಸ್ಥಾನ ಲಭಿಸುವ ಸಾಧ್ಯತೆಯೂ ಇದೆ.
With the appointment of a new president of the state BJP, there is a lot of curiosity as to who will be the leader of the BJP legislature party. The new state president B Y Vijayendra said that the new leader will be elected at the legislature party meeting to be held on November 17.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm