ಬ್ರೇಕಿಂಗ್ ನ್ಯೂಸ್
13-11-23 08:12 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಐದು ರಾಜ್ಯಗಳ ಚುನಾವಣೆ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳನ್ನು ಬದಲಿಸಲು ಪಕ್ಷ ಚಿಂತನೆ ನಡೆಸಿದೆ ಎಂದವರು ಹೇಳಿದ್ದಾರೆ.
ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಯುವ ನಾಯಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಪಕ್ಷದ ರಾಜ್ಯ ಘಟಕದ ಪುನಶ್ಚೇತನಕ್ಕೆ ಮುಂದಾಗಿದೆ. ಲೋಕಸಭೆ ಚುನಾವಣೆ ವರೆಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಮೂವರು ಸಚಿವರಾಗಿರುವ ಕಾರಣ ಪಕ್ಷದ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಐದು ರಾಜ್ಯಗಳ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ನಾವು ಈಗ ಸಚಿವರಾಗಿರುವ ಕಾರಣ ನಮ್ಮನ್ನು ಬಿಡುಗಡೆ ಮಾಡುವಂತೆ ಹೈಕಮಾಂಡ್ಗೆ ಕೇಳಿದ್ದೇವೆ. ನಾವು ಈಗಾಗಲೇ ಶಿಫಾರಸುಗಳನ್ನು ಕಳುಹಿಸಿದ್ದೇವೆ. ಐದು ರಾಜ್ಯಗಳ ಚುನಾವಣೆ ನಂತರ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಎಂಎಲ್ಸಿ ಸಲೀಂ ಅಹಮದ್ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲದೆ, 20 ಜಿಲ್ಲಾಧ್ಯಕ್ಷರ ಸ್ಥಾನವನ್ನು ಲೋಕಸಭೆ ಚುನಾವಣೆಗೂ ಮುನ್ನ ಬದಲಾಯಿಸಲು ಪಕ್ಷ ಮುಂದಾಗಿದೆ.
“We are planning to field one Lingayat and one Kuruba community candidate in the coming Lok Sabha polls in Belagavi district,” Public Works Minister Satish Jarkiholi said in Belagavi on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am