ಬ್ರೇಕಿಂಗ್ ನ್ಯೂಸ್
13-11-23 08:12 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಐದು ರಾಜ್ಯಗಳ ಚುನಾವಣೆ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳನ್ನು ಬದಲಿಸಲು ಪಕ್ಷ ಚಿಂತನೆ ನಡೆಸಿದೆ ಎಂದವರು ಹೇಳಿದ್ದಾರೆ.
ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಯುವ ನಾಯಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಪಕ್ಷದ ರಾಜ್ಯ ಘಟಕದ ಪುನಶ್ಚೇತನಕ್ಕೆ ಮುಂದಾಗಿದೆ. ಲೋಕಸಭೆ ಚುನಾವಣೆ ವರೆಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಮೂವರು ಸಚಿವರಾಗಿರುವ ಕಾರಣ ಪಕ್ಷದ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಐದು ರಾಜ್ಯಗಳ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ನಾವು ಈಗ ಸಚಿವರಾಗಿರುವ ಕಾರಣ ನಮ್ಮನ್ನು ಬಿಡುಗಡೆ ಮಾಡುವಂತೆ ಹೈಕಮಾಂಡ್ಗೆ ಕೇಳಿದ್ದೇವೆ. ನಾವು ಈಗಾಗಲೇ ಶಿಫಾರಸುಗಳನ್ನು ಕಳುಹಿಸಿದ್ದೇವೆ. ಐದು ರಾಜ್ಯಗಳ ಚುನಾವಣೆ ನಂತರ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಎಂಎಲ್ಸಿ ಸಲೀಂ ಅಹಮದ್ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲದೆ, 20 ಜಿಲ್ಲಾಧ್ಯಕ್ಷರ ಸ್ಥಾನವನ್ನು ಲೋಕಸಭೆ ಚುನಾವಣೆಗೂ ಮುನ್ನ ಬದಲಾಯಿಸಲು ಪಕ್ಷ ಮುಂದಾಗಿದೆ.
“We are planning to field one Lingayat and one Kuruba community candidate in the coming Lok Sabha polls in Belagavi district,” Public Works Minister Satish Jarkiholi said in Belagavi on Monday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm