ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am