ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am