ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm