ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm