ಬ್ರೇಕಿಂಗ್ ನ್ಯೂಸ್
20-11-23 07:00 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಕಾಂತಾರ - 2 ಚಿತ್ರ ಶೀಘ್ರದಲ್ಲೇ ಬರಲಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಚಿತ್ರದ ಕತೆಯ ಬಗ್ಗೆಯೂ ಕಾಂತಾರ ಚಿತ್ರ ಕತೆಗಿಂತಲೂ ಹಿಂದಿನದ್ದು ಎಂದು ಹೇಳಿ ಕುತೂಹಲ ಹುಟ್ಟಿಸಿದ್ದರು. ಈಗ ಆ ಕತೆ ಯಾವುದು ಎನ್ನುವ ಸಣ್ಣ ಸುಳಿವು ಹೊರ ಬಿದ್ದಿದೆ.
ತುಳುನಾಡಿನ ದೈವದ ಕಥೆಯನ್ನಿಟ್ಟುಕೊಂಡು ನಿರ್ಮಿಸಿದ್ದ ಕಾಂತಾರ ಪ್ಯಾನ್ ಇಂಡಿಯಾದಲ್ಲಿ ಹಿಟ್ ಆಗಿತ್ತು. ದೊಡ್ಡ ಯಶಸ್ಸಿನ ಬಳಿಕ ಸಿನಿಮಾದ ಎರಡನೇ ಭಾಗ ಅಂದರೆ ಪ್ರೀಕ್ವೆಲ್ ನ್ನು ತೆರೆಗೆ ತರುವುದಾಗಿ ರಿಷಬ್ ಶೆಟ್ಟಿ ಇದೇ ವರ್ಷದ ಫೆಬ್ರವರಿಯಲ್ಲಿ ಸಿನಿಮಾದ 100ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ಹೇಳಿದ್ದರು. ನೀವು ನೋಡಿರುವುದು ಸಿನಿಮಾದ 2ನೇ ಭಾಗ, ಮುಂದೆ ಬರಲಿರುವುದು ಸಿನಿಮಾದ ಮೊದಲ ಭಾಗ ಎಂದು ಹೇಳಿದ್ದು ಕುತೂಹಲಕ್ಕೀಡಾಗುವಂತೆ ಮಾಡಿತ್ತು.
ಸಿನಿಮಾದ ಚಿತ್ರೀಕರಣ ಹಾಗೂ ಸ್ಕ್ರಿಪ್ಟ್ ಬಗ್ಗೆ ರಿಷಬ್ ಸಾಕಷ್ಟು ತಯಾರಿ ನಡೆಸಿದ್ದಾರೆ. ಆದರೆ ಎರಡನೇ ಭಾಗದ ಕಥೆ ಏನು ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಿದೆ. ಕೆಲವು ಮಾಹಿತಿ ಪ್ರಕಾರ, ʼಕಾಂತಾರ-2ʼ ನಲ್ಲಿ ಪಂಜುರ್ಲಿ ದೈವದ ಮೂಲದ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 300-400ರ ಕಾಲದ ಕಥೆ ಇರಲಿದ್ದು ಪಂಜುರ್ಲಿ ದೈವದ ಹುಟ್ಟು ಹಾಗೂ ಬೆಳೆದುಬಂದ ಆಚರಣೆ ಕುರಿತ ಕಥೆ ಇರಲಿದೆ ಎನ್ನುವ ಸುಳಿವು ಸಿಕ್ಕಿದೆ.
ʼಕಾಂತಾರʼ ಚಿತ್ರದಲ್ಲಿ ತುಳುನಾಡಿನ ಆಚರಣೆ, ಸಂಪ್ರದಾಯಗಳು ಕಾಣಿಸಿಕೊಂಡಿದ್ದವು. ಸಂಪೂರ್ಣ ಚಿತ್ರೀಕರಣ ಕುಂದಾಪುರದ ರಿಷಬ್ ಶೆಟ್ಟಿ ಊರಿನಲ್ಲೇ ನಡೆದಿತ್ತು. ಚಿತ್ರಕ್ಕೆ ಸುಮಾರು 16 ಕೋಟಿ ರೂ. ಖರ್ಚು ಆಗಿತ್ತು. ʼಕಾಂತಾರ-2ʼ ಚಿತ್ರದ ಬಜೆಟ್ ಅದಕ್ಕೂ ಹೆಚ್ಚಿನದಾಗಿರಲಿದೆ. ಇದೇ ನವೆಂಬರ್ ಅಂತ್ಯಕ್ಕೆ ಉಡುಪಿಯಲ್ಲಿ ʼಕಾಂತಾರ-2ʼ ಸಿನಿಮಾದ ಮುಹೂರ್ತ ನೆರವೇರಲಿದೆ. ಮುಂದಿನ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯಿದೆ.
After the phenomenal success of 'Kantara', Rishab Shetty and team are all set for 'Kantara 2'. The film will be a prequel to the ever-successful first part. The film will go on the floors soon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am