ಬ್ರೇಕಿಂಗ್ ನ್ಯೂಸ್
21-11-23 11:08 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30ಕ್ಕೆ ನಿವೃತ್ತಿಯಾಗುತ್ತಿರುವ ವಂದಿತಾ ಶರ್ಮ ಅವರ ಜಾಗವನ್ನು ಗೋಯಲ್ ತುಂಬಲಿದ್ದಾರೆ.
2022ರ ಮೇ ತಿಂಗಳಲ್ಲಿ ವಂದಿತಾ ಶರ್ಮಾ ರಾಜ್ಯ ಸರಕಾರದ ಅತ್ಯುನ್ನತ ಅಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಈ ಸ್ಥಾನಕ್ಕೇರಿದ ನಾಲ್ಕನೇ ಮಹಿಳಾ ಅಧಿಕಾರಿ ಇವರಾಗಿದ್ದಾರೆ. 1986ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಗೋಯಲ್ ಸದ್ಯಕ್ಕೆ ಮುಖ್ಯಮಂತ್ರಿಯವರ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿದ್ದಾರೆ.
ಇತರೇ ಹಲವು ಹಿರಿಯ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ಹುದ್ದೆಯ ಆಕಾಂಕ್ಷಿ ಲಿಸ್ಟಲ್ಲಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಯಲ್ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ವಿ. ಮಂಜುಳಾ, ಅಯಜ್ ಸೇಠ್, ಜಾವೇದ್ ಅಖ್ತರ್, ಎಲ್.ಕೆ. ಅತೀಕ್, ಉಮಾ ಮಹದೇವನ್, ಗೌರವ್ ಗುಪ್ತಾ ಆಕಾಂಕ್ಷಿ ಲಿಸ್ಟಲ್ಲಿದ್ದರು.
ಹರ್ಯಾಣ ಮೂಲದ ರಜನೀಶ್ ಗೋಯಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರೈಸಿದ್ದು ಬಳಿಕ ಸಾರ್ವಜನಿಕ ಆಡಳಿತ ವಿಷಯದಲ್ಲಿ ಪಿಎಚ್ ಡಿ ಮಾಡಿದ್ದರು. 37 ವರ್ಷಗಳ ಸೇವಾವಧಿಯಲ್ಲಿ ಅತ್ಯುತ್ತಮ ಅಧಿಕಾರಿಯಾಗಿ ಗೋಯಲ್ ಹೆಸರು ಮಾಡಿದ್ದಾರೆ. ಬಿಬಿಎಂಪಿ ಕಮಿಷನರ್, ಉನ್ನತ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಪತ್ನಿ ಶಾಲಿನಿ ರಜನೀಶ್ ಕೂಡ ರಾಜ್ಯ ಸರಕಾರದಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.
Rajneesh Goel, IAS officer of the 1986 batch, has been appointed as the next Chief Secretary of Karnataka. The State government on Tuesday issued an order appointing Mr. Goel, Additional Chief Secretary, Home Department, as the Chief Secretary. He will take charge from outgoing Chief Secretary Vandita Sharma, who is retiring from service on superannuation, on November 30.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am